Featured

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಎರಡು ಬೃಹತ್ ಗಾತ್ರದ ವೀರಗಲ್ಲು – Vishwanews24

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಕಾಣಸಿಗುವ ಎರಡು ಬೃಹತ್ ಗಾತ್ರದ ವೀರಗಲ್ಲು

ಪಡುಬಿದ್ರಿ : ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರುವಿನಿಂದ ಮುಂದೆ ಸಾಗಿ  ಕೆಲ್ಲಾರು ಪಲಿಮಾರುವಿನ ಅಸ್ತಪಡ್ವೆ ಎಂಬಲ್ಲಿ ಆಟದ ಮೈದಾನದ ಬಳಿ ಆಲದ ಮರದ ಕೆಳಗಡೆ ಎರಡು ಬೃಹತ್ ಗಾತ್ರದ ವೀರಗಲ್ಲು ಕಾಣಸಿಗುತ್ತದೆ.
ಸುಮಾರು ಒಂದು ಏಳು ಫೀಟು. ಮತ್ತೊಂದು ಎಂಟು ಫೀಟು ಎತ್ತರದ ಎರಡು ಫೀಟು ಆಗಲ ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ ಎಂಬಂತೆ. ಉಬ್ಬಿಕೊಂಡ ಚಿತ್ರ  ಕಾಣಸಿಗುತ್ತದೆ. ತಲೆಬಾಗದಲ್ಲಿ ಸೂರ್ಯ ಚಂದ್ರ. ಕತ್ತಿ ಗುರಾಣಿ. ಸೂಡಿ ಹಾಕಿದಂತೆ ತಲೆಯ ಭಾಗ. ವೀರರು ಬಳಸುವಂತಹ ಮೈ ಹೊದಿಕೆಯ ಬಟ್ಟೆ ಹೊಂದಿರುತ್ತದೆ. ಬಲಕಾಲು ಮುಂದೆ ನಿಂತು. ಗುರಾಣಿ ಕತ್ತಿ ಹಿಡಿದು ‌ ಯುದ್ಧಕ್ಕೆ ಆಹ್ವಾನಿಸಿದಂತಿದೆ.
ಪುರುಷನ ಚಿತ್ರ ಇರುವ ಶಾಸನ ದಲ್ಲಿ ಬಾಲದಂತಿದೆ.. ಈ ಭಾಗದ ಜನರು ಇದನ್ನು ಕೋಟಿ ಚೆನ್ನೇರು ಅನ್ನುತ್ತಾರೆ. ಅನತಿ ದೂರದಲ್ಲಿ ದೈವರಾಜ ಕೊಡ್ದಬ್ಬುವಿನ ಸನ್ನಿಧಾನವಿದೆ.  ಪ್ರಮುಖ ರಸ್ತೆಯಲ್ಲಿ ಕೋಟಿ ಚೆನ್ನಯರ ಗರಡಿಯೂ ಇದೆ. ಈ ಶಾಸನಗಳು ಸರಕಾರಿ ಜಾಗದಲ್ಲಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗೋಳಿಮರದ (ಆಲದಮರ) ಕೆಳಗಡೆ ನಿರ್ಜನ ಪ್ರದೇಶವಾದ್ದರಿಂದ ಯಾರು ಇದರ ಕಡೆಗೆಹೋಗುವುದಿಲ್ಲ ಈಗಾಗಲೇ ಬೇಲಿ ಹಾಕಿದ್ದು. ಸ್ವಚ್ಛತೆ ಕಾಣುವುದಿಲ್ಲ. ಉಡುಪಿ ನಿಟ್ಟೂರಿನ ನಿವಾಸಿ ರಾಜೇಶ್ ಅವರ ಮಾಹಿತಿ ಮೇರೆಗೆ ಗಣೇಶ್ ರಾಜ್ ಸರಳೇಬೆಟ್ಟು ಹಾಗೂ ಜಯಶೆಟ್ಟಿಬನ್ನಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರಾದ ಕೇಶವ ಶೆಟ್ಟಿ ಭಾಸ್ಕರ, ಪ್ರಕಾಶ, ರಮೇಶ,  ರಾಘವೇಂದ್ರ ಸತೀಶ್ ಮುಖಾರಿ ವಿಠಲ ಮೇಸ್ತ್ರಿ ಜೊತೆಗಿದ್ದು ಮಾಹಿತಿ ನೀಡಿ ಸಹಕರಿಸಿದರು.
Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago