ಪಡುಬಿದ್ರೆ: ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 5 ಲಕ್ಷ ನಗದನ್ನು ಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಚೆಕ್ ಪೋಸ್ಟಿನಲ್ಲಿ ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ ಎ ಅವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ KA-20-ME-2561 ನೇ TOYOTA GLANZA ನೇ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಒಂದು ಕೇಸರಿ ಬಣ್ಣದ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಬಂಟ್ವಾಳ ತಾಲೂಕು, ಪ್ರಸಾದ ಎಂಬ ನೀಲಿ ಬಣ್ಣ ಪ್ರಿಂಟ್ ಇರುವ ಕೈ ಚೀಲ ಇದ್ದು ಅದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡು ಬಂದಿದೆ.
ಈ ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿ ಇದ್ದ ಅಬ್ದುಲ್ ಖಾದರ್ ಜೈಲಾನಿ ಎಂಬುವರನ್ನು ವಿಚಾರಿಸಿದಾಗ ಹಣದ ಬಗ್ಗೆ ದಾಖಲಾತಿಗಳನ್ನು ಕೇಳಲಾಗಿ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸಿರುವುದಿಲ್ಲ ಆದ್ದರಿಂದ ರೂಪಾಯಿ 5,00,000/- ಮತ್ತು ಕಾರನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…