Featured

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರ ಕಡೆಗೆ ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತ ಕಡಲ ತಡೆಗೋಡೆ ನಿರ್ಮಿಸುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ಅವರು ರಾಜ್ಯದ ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ನಡಿಪಟ್ಟಣ ಪ್ರದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಸಮುದ್ರ ಕೊರೆತದಿಂದ ಸ್ಥಳೀಯ ನಿವಾಸಿಗಳ ಮನೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ಹಾಗೂ ಮೀನುಗಾರರ ಜೀವನೋಪಾಯಕ್ಕೆ ಗಂಭೀರ ಅಪಾಯ ಎದುರಾಗಿರುವುದನ್ನು ಉಲ್ಲೇಖಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗುವುದರಿಂದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿದ್ದು, ಸ್ಥಳೀಯರು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರದೇಶದ ಸಮೀಕ್ಷೆಯನ್ನು ಸಂಬಂಧಪಟ್ಟ ಇಲಾಖೆಯು ಈಗಾಗಲೇ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಸುಮಾರು 700 ಮೀಟರ್ ವ್ಯಾಪ್ತಿಯಲ್ಲಿ ಕಡಲ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ಕಾಮಗಾರಿ ಆರಂಭಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಕಾಮಗಾರಿಯಿಂದ ಸಮುದ್ರ ಕೊರೆತವನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ, ಸ್ಥಳೀಯರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದರ ಜೊತೆಗೆ ಕರಾವಳಿ ಪ್ರದೇಶದ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಲಿದೆ ಎಂದು ವಿಶ್ವಾಸ್ ವಿ. ಅಮೀನ್ ತಿಳಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago