Featured

ಪಡುಬಿದ್ರಿ : ನಡ್ಸಾಲಿನಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಕ್ಕೆ ವಿರೋಧ ; ಕಾಮಗಾರಿ ತಾತ್ಕಾಲಿಕ ಸ್ಥಗಿತ -Vishwanews24

ಪಡುಬಿದ್ರಿ : ನಡ್ಸಾಲಿನಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಕ್ಕೆ ವಿರೋಧ ಕಾಮಗಾರಿ ತಾತ್ಕಾಲಿಕ ಸ್ಥಗಿತ -Vishwanews24

ಪಡುಬಿದ್ರಿ: ಪಡುಬಿದ್ರಿ ನಡ್ಸಾಲ್‌ ಗ್ರಾಮದ ಸರ್ವೆ ನಂಬ್ರ77/37ರಲ್ಲಿ ಗೊತ್ತುಪಡಿಸಿದ್ದ 0.19 ಎಕರೆ ಸರಕಾರಿ ಜಮೀನಿನಲ್ಲಿನ ನಿರ್ಮಿಸಲು ಉದ್ದೇಶಿಸಿದ್ದ ಪಡುಬಿದ್ರಿ ಗ್ರಾ.ಪಂ.ನ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆ ಘಟಕ ಕಾಮಗಾರಿಯನ್ನು ಅಬ್ಬೇಡಿ ಹಾಗೂ ಸುಜ್ಲಾನ್‌ ಆರ್‌. ಆರ್‌. ಕಾಲನಿ ನಿವಾಸಿಗಳ ತೀವ್ರ ವಿರೋಧದಿಂದಾಗಿ ತಾತ್ಕಾಲಿಕವಾಗಿ ಕೈಬಿಡಲಾಗಿದೆ.

ಜಿಲ್ಲಾಧಿಕಾರಿ ಆದೇಶದಂತೆ ಘಟಕ ನಿರ್ಮಾಣ ಕಾಮಗಾರಿಗೆ ಗ್ರಾ.ಪಂ.ನಿಂದ ಸೋಮವಾರ ಸಿದ್ಧತೆ ನಡೆಸಲಾಗಿತ್ತು. ಈ ವಿಷಯ ತಿಳಿದ ಅಬ್ಬೇಡಿ ಹಾಗೂ ಸುಜ್ಲಾನ್‌ ಆರ್‌.ಆರ್‌. ಕಾಲನಿ ನಿವಾಸಿಗಳು ಪ್ರತಿಭಟನೆಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಗ್ರಾ.ಪಂ. ಪ್ರತಿನಿಧಿಗಳು ಪಂಚಾಯತ್‌ಗೆ ಗ್ರಾಮಸ್ಥರನ್ನು ಆಹ್ವಾನಿಸಿ ಮಾತುಕತೆಗೆ ಮುಂದಾಗಿದ್ದರು. ಈ ವೇಳೆ ಪರಿಸರದಲ್ಲಿಯೇ ಇರುವ ಅಂಗನವಾಡಿಯ ಮಕ್ಕಳಿಗೆ, ಸಿಬಂದಿಗೆ, ಸುತ್ತಲಿನ 500 ನಿವಾಸಿಗಳಿಗೆ ಸಮಸ್ಯೆಯಾಗುವ ಸಾಧ್ಯತೆಯನ್ನು ಹೇಳಿ, ಘಟಕ ನಿರ್ಮಿಸಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಪ್ರಸ್ತುತ ಗೊತ್ತುಪಡಿಸಿರುವ ಜಮೀನಿನಲ್ಲಿ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಸಾರ್ವಜನಿಕ ನೋಟಿಸ್‌ ಪ್ರಕಟಿಸಿದ್ದರೂ ಆಕ್ಷೇಪ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ನಡಾವಳಿಯಲ್ಲಿ ಉಲ್ಲೇಖೀಸಲಾಗಿದ್ದು ಖಂಡನಾರ್ಹ. ಈ ಬಗ್ಗೆ ಸಾರ್ವ ಜನಿಕರಿಗೆ ಯಾವುದೇ ನೋಟಿಸ್‌ ಅಥವಾ ಮಾಹಿತಿ ನೀಡದೆ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆದೇಶ ಹೊರಡಿಸಲಾಗಿದೆ. ಆದೇಶವನ್ನು ತತ್‌ಕ್ಷಣ ಹಿಂಪಡೆದು ನಿರ್ಜನ ಪ್ರದೇಶದಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದರು.

ನಾರಾಯಣ ಶೆಟ್ಟಿ, ಭಾಸ್ಕರ್‌ ಪಡುಬಿದ್ರಿ, ಲೋಕೇಶ್‌ ಕಂಚಿನಡ್ಕ, ಮನೋಜ್‌ ಅಬ್ಬೇಡಿ, ಮೊಹಿಯುದ್ದೀನ್‌, ಉಮಾ ನಾಥ ಕೆ.ಆರ್‌., ನಿಜಾಮುದ್ದೀನ್‌, ಸದಾಶಿವ ಪಡುಬಿದ್ರಿ, ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ದಲಿತ ಮುಖಂಡ ಲೋಕೇಶ್ ಕಂಚಿನಡ್ಕ, ಗ್ರಾಮ ಪಂಚಾಯತ್ ಸದರಾದ ಸಂಜೀವಿ ಪೂಜಾರ್ತಿ, ನವೀನ್ ಎನ್.ಶೆಟ್ಟಿ, ನಿಯಾಝ್, ಎಂ.ಎಸ್. ಶಫಿ, ಜ್ಯೂತಿ ಮೆನನ್, ನಾರಾಯಣ ಶೆಟ್ಟಿ, ಸದಾಶಿವ್ ಪಡುಬಿದ್ರಿ, ಭಾಸ್ಕರ್ ಪಡುಬಿದ್ರಿ, ನಿಝಾಮುದ್ದೀನ್, ಮನೋಜ್ ಅಬ್ಬೇಡಿ, ಮೊಹಿಯುದ್ದೀನ್, ಉಮಾನಾಥ ಕೆ.ಆರ್ ಮತ್ತು ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

ಇದನ್ನೂ ಓದಿ : ಪಾಣೆಮಂಗಳೂರು : ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ; ಆರು ಮಂದಿ ಗಂಭೀರ -Vishwanews24

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

9 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

13 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

15 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

16 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

17 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

17 hours ago