ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು ತುಳುವಿನಲ್ಲಿ ಮಾತನಾಡುವುದನ್ನು ನಾವಿಲ್ಲಿ ಕಾಣಬಹುದು.
https://x.com/vishwanews24/status/1845001702279107052
ಉಡುಪಿ ಭಾಗದಲ್ಲಿ ನವರಾತ್ರಿಯ ಸಂದರ್ಭ ವೇಷ ಧರಿಸಿ ಮನೆ ಮನೆಗೆ ತೆರಳುವ ಸಂಪ್ರದಾಯವಿದೆ. ಪ್ರತಿ ವರ್ಷವೂ ವಿಭಿನ್ನ ಮತ್ತು ವಿಶೇಷವಾಗಿರುವ ವೇಷಗಳೊಂದಿಗೆ ಮನೆಮನೆಗೆ ವೇಷಧಾರಿಗಳು ಬರುತ್ತಾರೆ. ಹಾಗೆಯೇ ಪ್ರಸ್ತುತ ವಿದ್ಯಮಾನಗಳನ್ನು ಇಟ್ಟುಕೊಂಡು ವೇಷಧಾರಿಗಳಿಬ್ಬರು ನವರಾತ್ರಿ ವೇಷ ಧರಿಸಿದ್ದಾರೆ. ರೇಣುಕಾ ಸ್ವಾಮಿಯ ಹತ್ಯೆಯ ಬಳಿಕ ಆತನ ಪ್ರೇತವನ್ನು ಕೊಂಡೊಯ್ಯಲು ಯಮರಾಜ ಬಂದಿದ್ದು, ಯಮರಾಜ ವೇಷಧಾರಿ ರೇಣುಕಾ ಸ್ವಾಮಿಯ ಪ್ರೇತವನ್ನು ಕೊಂಡೊಯ್ಯುವ ಹಾಸ್ಯ ಸನ್ನಿವೇಶವನ್ನು ಇಟ್ಟುಕೊಂಡು ವೇಷಧರಿಸಿದ್ದಾರೆ. ರೇಣುಕಾ ಸ್ವಾಮಿ ಪ್ರೇತ ಮತ್ತು ಯಮರಾಜ ವೇಷ ಗಮನ ಸೆಳೆಯುತ್ತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…