ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು ತುಳುವಿನಲ್ಲಿ ಮಾತನಾಡುವುದನ್ನು ನಾವಿಲ್ಲಿ ಕಾಣಬಹುದು.
https://x.com/vishwanews24/status/1845001702279107052
ಉಡುಪಿ ಭಾಗದಲ್ಲಿ ನವರಾತ್ರಿಯ ಸಂದರ್ಭ ವೇಷ ಧರಿಸಿ ಮನೆ ಮನೆಗೆ ತೆರಳುವ ಸಂಪ್ರದಾಯವಿದೆ. ಪ್ರತಿ ವರ್ಷವೂ ವಿಭಿನ್ನ ಮತ್ತು ವಿಶೇಷವಾಗಿರುವ ವೇಷಗಳೊಂದಿಗೆ ಮನೆಮನೆಗೆ ವೇಷಧಾರಿಗಳು ಬರುತ್ತಾರೆ. ಹಾಗೆಯೇ ಪ್ರಸ್ತುತ ವಿದ್ಯಮಾನಗಳನ್ನು ಇಟ್ಟುಕೊಂಡು ವೇಷಧಾರಿಗಳಿಬ್ಬರು ನವರಾತ್ರಿ ವೇಷ ಧರಿಸಿದ್ದಾರೆ. ರೇಣುಕಾ ಸ್ವಾಮಿಯ ಹತ್ಯೆಯ ಬಳಿಕ ಆತನ ಪ್ರೇತವನ್ನು ಕೊಂಡೊಯ್ಯಲು ಯಮರಾಜ ಬಂದಿದ್ದು, ಯಮರಾಜ ವೇಷಧಾರಿ ರೇಣುಕಾ ಸ್ವಾಮಿಯ ಪ್ರೇತವನ್ನು ಕೊಂಡೊಯ್ಯುವ ಹಾಸ್ಯ ಸನ್ನಿವೇಶವನ್ನು ಇಟ್ಟುಕೊಂಡು ವೇಷಧರಿಸಿದ್ದಾರೆ. ರೇಣುಕಾ ಸ್ವಾಮಿ ಪ್ರೇತ ಮತ್ತು ಯಮರಾಜ ವೇಷ ಗಮನ ಸೆಳೆಯುತ್ತಿದೆ.
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…