ಪಡುಬಿದ್ರಿ: ಕಂಚಿನಡ್ಕ ರಸ್ತೆಯಾಗಿ ಜ. 31ರ ರಾತ್ರಿಯ ಸುಮಾರು 8ಗಂಟೆಯ ವೇಳೆಗೆ ಮನೆಯತ್ತ ಹೋಗುತ್ತಿದ್ದ ತರಕಾರಿ ಉದ್ಯಮಿ ಮನ್ಸೂರ್ ಎಂಬುವರ ಬಳಿಯಿದ್ದ 3ಲಕ್ಷ ರೂ. ಗಳನ್ನು ಗುಂಪೊಂದು ದರೋಡೆ ಗೈದಿರುವ ಬಗ್ಗೆ ಪಡುಬಿದ್ರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ರಿಕ್ಷಾ ಹಾಗೂ ಎರಡು ಕಾರುಗಳಲ್ಲಿ ಸುಮಾರು 8 ಮಂದಿ ದರೋಡೆಕೋರರು ಬಂದಿದ್ದರು. ಪಿಸ್ತೂಲ್, ಚೂರಿ, ದೊಣ್ಣೆ, ತಲವಾರುಗಳನ್ನು ಹೊಂದಿದ್ದ ಈ ಗುಂಪು ಉದ್ಯಮಿಯನ್ನು ತಡೆದು ನಿಲ್ಲಿಸಿ ಹಣೆಗೆ ಪಿಸ್ತೂಲನ್ನು ಗುರಿ ಇರಿಸಿ ಹಣವನ್ನು ನೀಡುವಂತೆ ಬೆದರಿಸಿತ್ತು ಎಂದು ಪೋಲೀಸರಿಗಿತ್ತ ದೂರಲ್ಲಿ ತಿಳಿಸಲಾಗಿದೆ.
ಆರೋಪಿಗಳನ್ನು ಕಂಚಿನಡ್ಕ ನಿವಾಸಿಗಳಾದ ಹಸನ್ ಬಾವಾ, ಫಿರೋಝ್, ರೆಹಮಾನ್, ನಝೀರ್, ರಹೀಮ್, ಯೂಸುಫ್, ಕಾಟಿಪಳ್ಳದ ಅಜೀದ್ ಸಹಿತ ಎಂಟು ಮಂದಿ ದರೋಡೆ ನಡೆಸಿರುವ ಆರೋಪಿಗಳೆಂದು ಪೋಲೀಸರಿಗಿತ್ತ ದೂರಲ್ಲಿ ಮನ್ಸೂರ್ ತಿಳಿಸಿದ್ದಾರೆ.
ದೂರುದಾರ ಮನ್ಸೂರ್ ಉಡುಪಿಯ ಸರಕಾರಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…