Featured

ಪಡುಬಿದ್ರಿ: ಪೆಟ್ರೋಲ್‌ ಬಂಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ; ನಾಲ್ವರ ಬಂಧನ – Vishwanews24

ಪಡುಬಿದ್ರಿ: ಪೆಟ್ರೋಲ್‌ ಬಂಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ – ನಾಲ್ವರ ಬಂಧನ

ಪಡುಬಿದ್ರಿ: ಕಾರ್ಕಳ ರಸ್ತೆಯ ಸ್ವರಾಜ್‌ ಪೆಟ್ರೋಲ್‌ ಪಂಪಿನಲ್ಲಿ ಪೆಟ್ರೋಲ್‌ ಹಾಕುವ ಕೆಲಸದಲ್ಲಿರುವ ನಿತೇಶ್‌ (32) ಅವರನ್ನು ಆ. 23ರಂದು ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹೊಡೆದಿದ್ದಲ್ಲದೆ, ಅಲ್ಲಿದ್ದ ಮಹಿಳಾ ಕೆಲಸಗಾರರನ್ನೂ ಬೆದರಿಸಿ, ಪಂಪಿಗೆ ಹಾನಿ ಮಾಡಿರುವ ಆರೋಪದಲ್ಲಿ ಕಂಚಿನಡ್ಕದ ಅಬ್ದುಲ್‌ ರಹೀಮ್‌, ಆತನ ಮಗ ಮೊಹಮ್ಮದ್‌ ಶಾನಿದ್‌, ಕನ್ನಂಗಾರಿನ ಮಸೂದ್‌, ಕಂಚಿನಡ್ಕದ ಸಿರಾಜ್‌ ಹಾಗೂ ಆಶೀರ್‌ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪೈಕಿ ಆಶೀರ್‌ ಹೊರತುಪಡಿಸಿ ಉಳಿದ ನಾಲ್ವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್‌ ರಹೀಮ್‌ ಸ್ಕೂಟರಿನಲ್ಲಿ ಬಂದು ಖಾಲಿ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿಸಿ ಕೊಡುವಂತೆ ಕೇಳಿದ್ದ. ಬಾಟಲಿ ಇಲ್ಲ ಎಂದಾಗ ಆರೋಪಿಯು ಡಸ್ಟ್‌ಬಿನ್‌ನಲ್ಲಿದ್ದ ಬಾಟಲಿಯೊಂದನ್ನು ಎತ್ತಿಕೊಂಡು ಬಂದು ಪೆಟ್ರೋಲ್‌ ತುಂಬಿಸುವಂತೆ ಹೇಳಿದ್ದಾನೆ. ಅದು ತೂತಾಗಿದ್ದು, ಅದರಲ್ಲಿ ಪೆಟ್ರೋಲ್‌ ತುಂಬಲು ಆಗುವುದಿಲ್ಲವೆಂದು ಹೇಳಿದ್ದಕ್ಕೆ ನಿತೇಶ್‌ ಮೇಲೆ ಹಲ್ಲೆ ಮಾಡಿದ್ದ.

ಬಳಿಕ ಸಂಜೆಯ ವೇಳೆ ಗುಂಪು ಕಟ್ಟಿಕೊಂಡು ಬಂದ ಆರೋಪಿಯು ಮಹಿಳಾ ಕೆಲಸಗಾರರನ್ನೂ ಅಟ್ಟಾಡಿಸಿಕೊಂಡು ಹೋಗುತ್ತಾ ಪ್ರೇಮಾ ಎಂಬವರನ್ನು ಆರೋಪಿತರು ಕೈಯಿಂದ ದೂಡಿದ್ದು, ಆಕೆ ತಪ್ಪಿಸಿಕೊಂಡು ಹಿಂಭಾಗದ ಶೌಚಾಲಯದಲ್ಲಿ ಅಡಗಿ ಕುಳಿತುಕೊಂಡಳು. ಬಳಿಕ ಸಿರಾಜ್‌ ಎಂಬಾತನು ಪಂಪಿನಲ್ಲಿ ಅಳವಡಿಸಲಾಗಿದ್ದ ಗಾಜಿಗೆ ಎಸೆದು ಹಾನಿ ಉಂಟು ಮಾಡಿದ್ದಾನೆ. ಇದೇ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಮೊಹಮ್ಮದ್‌ ಶಾನಿದ್‌ ಎಂಬಾತನು ಕಚೇರಿಯ ಒಳಗೆ ನುಗ್ಗಿ ಸುಮನ್ಯ ಎಂಬಾಕೆಯನ್ನು ಹಿಡಿಯಲು ಹೋಗಿದ್ದು, ಆಕೆ ತಪ್ಪಿಸಿಕೊಂಡಳು. ಬಳಿಕ ಆರೋಪಿಗಳೆಲ್ಲರೂ ಸಿಬಂದಿಗೆ ಬೆದರಿಕೆ ಹಾಕಿದ್ದಲ್ಲದೆ, ಪಂಪಿಗೆ ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿ ಹೋಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ನಿತೇಶ್‌ ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago