Featured

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ – Vishwanews24

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಅದರಿಂದ ಪಾರಾಗಲು ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ

ಪಡುಬಿದ್ರಿ: ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಬಳಿಕ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೈಯಾರ್ ರಸ್ತೆ ನಿವಾಸಿ ವಿದ್ಯಾ(29) ಮೃತರು ಎಂದು ಗುರುತಿಸಲಾಗಿದೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು.

ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದ ಎಂದು ದೂರಲಾಗಿದೆ.

ಹಿರಿಯರ ಸಲಹೆಗಳನ್ನು ಸ್ವೀಕರಿಸಿ ..ನೋಡೋಣ ಇಂದಿನ ದಿನ ಭವಿಷ್ಯ ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇದಲ್ಲದೇ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ವರದಕ್ಷಿಣೆಗಾಗಿ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್‌ರಾಜ್‌ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್‌ಹೌಸ್‌ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಯತಿನನು ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕ ಮಾಡುತ್ತಿರುವುದಾಗಿ ಪಡುಬಿದ್ರಿ ಪೊಲೀಸರಿಗೆ ಈ ಕುರಿತಾಗಿ ದೂರನ್ನಿತ್ತಿರುವ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago