Featured

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ – Vishwanews24

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಅದರಿಂದ ಪಾರಾಗಲು ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ

ಪಡುಬಿದ್ರಿ: ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಬಳಿಕ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೈಯಾರ್ ರಸ್ತೆ ನಿವಾಸಿ ವಿದ್ಯಾ(29) ಮೃತರು ಎಂದು ಗುರುತಿಸಲಾಗಿದೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು.

ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದ ಎಂದು ದೂರಲಾಗಿದೆ.

ಹಿರಿಯರ ಸಲಹೆಗಳನ್ನು ಸ್ವೀಕರಿಸಿ ..ನೋಡೋಣ ಇಂದಿನ ದಿನ ಭವಿಷ್ಯ ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇದಲ್ಲದೇ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ವರದಕ್ಷಿಣೆಗಾಗಿ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್‌ರಾಜ್‌ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್‌ಹೌಸ್‌ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಯತಿನನು ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕ ಮಾಡುತ್ತಿರುವುದಾಗಿ ಪಡುಬಿದ್ರಿ ಪೊಲೀಸರಿಗೆ ಈ ಕುರಿತಾಗಿ ದೂರನ್ನಿತ್ತಿರುವ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago