ಪಡುಬಿದ್ರಿ ಬಂಟರ ಸಂಘದಲ್ಲಿ ನೂತನವಾಗಿ ಪ್ರಾರಂಭಗೊಂಡ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸಂಘ (ನಿ.) ಪಡುಬಿದ್ರಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮುಂದಿನ 5 ವರ್ಷಗಳ ಅವಧಿಗೆ ಡಾ| ದೇವಿಪ್ರಸಾದ ಶೆಟ್ಟಿ ಬೆಳಪು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಉಪಾಧ್ಯಕ್ಷರಾಗಿ ಶ್ರೀನಾಥ ಹೆಗ್ಡೆ ನಡ್ಡಾಲುಗುತ್ತು ನಿರ್ದೇಶಕರುಗಳಾಗಿ ರವೀಂದ್ರನಾಥ ಜೆ. ಹೆಗ್ಡೆ, ಎರ್ಮಾಳ್ ಶಶಿಧರ ಶೆಟ್ಟಿ, ಸಾಂತೂರು ಭಾಸ್ಕರ ಶೆಟ್ಟಿ, ಗುಂಡ್ಲಾಡಿ ಸುರೇಶ ಶೆಟ್ಟಿ, ನವೀನಚಂದ್ರ ಜಿ. ಶೆಟ್ಟಿ, ಸಂತೋಷ ಶೆಟ್ಟಿ ಪಲ್ಲವಿ, ಮಾಧವ ಸಿ, ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ತು. ರವಿಶೆಟ್ಟಿ ಗುಂಡ್ಲಾಡಿ, ಸಂತೃಪ್ತಿ ಎಂ. ಶೆಟ್ಟಿ, ಶೋಭಾ ಜಿ. ಶೆಟ್ಟಿ ಆಯ್ಕೆಗೊಂಡಿರುತ್ತಾರೆ.
ನೂತನವಾಗಿ ಪ್ರಾರಂಭಗೊಂಡಿರುವ ಸಂಘಕ್ಕೆ ಪೂನಾದ ಉದ್ಯಮಿ ಸದಾನಂದ ಶೆಟ್ಟಿಯವರ ಕೊಡುಗೆ ಯಿಂದ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಸಂಪದಲ್ಲಿ ಸೇಫ್ ಲಾಕರ್ ಸೌಲಭ್ಯದೊಂದಿಗೆ ಠೇವಣಾತಿಗೂ ಆಕರ್ಷಕ ಬಡ್ಡಿದರ ನೀಡಲಾಗುವುದು. ಎಲ್ಲಾ ರೀತಿಯ ಸಾಲದ ಸೌಲಭ್ಯಗಳನ್ನು ಸರಳ ರೀತಿಯಲ್ಲಿ ನೀಡುವುದಲ್ಲದೆ ಪಡುಬಿದ್ರಿ, ಪರಿಸರದಲ್ಲಿ ಮಾದರಿ ಬ್ಯಾಂಕಿಂಗ್ ವ್ಯವಸ್ಥೆಯ ಸಂಕಲ್ಪ ಹೊಂದಲಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುವುದು. ಸಂಘದ ಲಾಭಾಂಶದಲ್ಲಿ ಸಮಾಜ ಮುಖಿ ಕಾರ್ಯಕ್ರಮಗಳಿಗೂ ಸಹಕಾರ ನೀಡಲಾಗುವುದೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…