ಪಡುಬಿದ್ರಿ ಬಂಟರ ಸಂಘದಲ್ಲಿ ನೂತನವಾಗಿ ಪ್ರಾರಂಭಗೊಂಡ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸಂಘ (ನಿ.) ಪಡುಬಿದ್ರಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮುಂದಿನ 5 ವರ್ಷಗಳ ಅವಧಿಗೆ ಡಾ| ದೇವಿಪ್ರಸಾದ ಶೆಟ್ಟಿ ಬೆಳಪು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಉಪಾಧ್ಯಕ್ಷರಾಗಿ ಶ್ರೀನಾಥ ಹೆಗ್ಡೆ ನಡ್ಡಾಲುಗುತ್ತು ನಿರ್ದೇಶಕರುಗಳಾಗಿ ರವೀಂದ್ರನಾಥ ಜೆ. ಹೆಗ್ಡೆ, ಎರ್ಮಾಳ್ ಶಶಿಧರ ಶೆಟ್ಟಿ, ಸಾಂತೂರು ಭಾಸ್ಕರ ಶೆಟ್ಟಿ, ಗುಂಡ್ಲಾಡಿ ಸುರೇಶ ಶೆಟ್ಟಿ, ನವೀನಚಂದ್ರ ಜಿ. ಶೆಟ್ಟಿ, ಸಂತೋಷ ಶೆಟ್ಟಿ ಪಲ್ಲವಿ, ಮಾಧವ ಸಿ, ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ತು. ರವಿಶೆಟ್ಟಿ ಗುಂಡ್ಲಾಡಿ, ಸಂತೃಪ್ತಿ ಎಂ. ಶೆಟ್ಟಿ, ಶೋಭಾ ಜಿ. ಶೆಟ್ಟಿ ಆಯ್ಕೆಗೊಂಡಿರುತ್ತಾರೆ.
ನೂತನವಾಗಿ ಪ್ರಾರಂಭಗೊಂಡಿರುವ ಸಂಘಕ್ಕೆ ಪೂನಾದ ಉದ್ಯಮಿ ಸದಾನಂದ ಶೆಟ್ಟಿಯವರ ಕೊಡುಗೆ ಯಿಂದ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಸಂಪದಲ್ಲಿ ಸೇಫ್ ಲಾಕರ್ ಸೌಲಭ್ಯದೊಂದಿಗೆ ಠೇವಣಾತಿಗೂ ಆಕರ್ಷಕ ಬಡ್ಡಿದರ ನೀಡಲಾಗುವುದು. ಎಲ್ಲಾ ರೀತಿಯ ಸಾಲದ ಸೌಲಭ್ಯಗಳನ್ನು ಸರಳ ರೀತಿಯಲ್ಲಿ ನೀಡುವುದಲ್ಲದೆ ಪಡುಬಿದ್ರಿ, ಪರಿಸರದಲ್ಲಿ ಮಾದರಿ ಬ್ಯಾಂಕಿಂಗ್ ವ್ಯವಸ್ಥೆಯ ಸಂಕಲ್ಪ ಹೊಂದಲಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುವುದು. ಸಂಘದ ಲಾಭಾಂಶದಲ್ಲಿ ಸಮಾಜ ಮುಖಿ ಕಾರ್ಯಕ್ರಮಗಳಿಗೂ ಸಹಕಾರ ನೀಡಲಾಗುವುದೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…