ಪಡುಬಿದ್ರಿ: ಬಸ್ ಟೈಮಿಂಗ್ ವಿಚಾರದಲ್ಲಿ ಬಸ್ ನಿರ್ವಾಹಕ ಮತ್ತು ಟೈಂ ಕೀಪರ್ ರಸ್ತೆ ನಡುವೆಯೇ ಗಲಾಟೆ ಮಾಡಿಕೊಂಡ ಘಟನೆ ರವಿವಾರ ಮಧ್ಯಾಹ್ನ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕುಂದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣೇಶ್ ಎಕ್ಸ್ಪ್ರೆಸ್ ಬಸ್ ಪಡುಬಿದ್ರಿ ನಿಲ್ದಾಣಕ್ಕೆ ಬಂದಾಗ ಟೈಮಿಂಗ್ ವಿಚಾರದಲ್ಲಿ ಬಸ್ನ ನಿರ್ವಾಹಕ ಸಮೀವುಲ್ಲಾ ಎಂಬಾತನಿಗೆ ಟೈಂ ಕೀಪರ್ ಮಹೇಶ್ ಎಂಬಾತ ಬೈಯ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ.
ಇದಕ್ಕೆ ಪ್ರತಿಯಾಗಿ ಟೈಂ ಕೀಪರ್ ಮಹೇಶ್ ಎಂಬಾತ ಪ್ರತಿದೂರು ನೀಡಿದ್ದು ಟೈಂ ಕೀಪರ್ ತಾನು ಟೈಮಿಂಗ್ ವಿಚಾರದಲ್ಲಿ ಬೇಗ ಹೋಗುವಂತೆ ತಿಳಿಸಿದಾಗ ನಿರ್ವಾಹಕ ಸಮೀವುಲ್ಲಾ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೈಯ್ದು, ಹೊಡೆದು, ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾನೆ.
ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…