ಪಡುಬಿದ್ರಿ: ಬಸ್ ಟೈಮಿಂಗ್ ವಿಚಾರದಲ್ಲಿ ಬಸ್ ನಿರ್ವಾಹಕ ಮತ್ತು ಟೈಂ ಕೀಪರ್ ರಸ್ತೆ ನಡುವೆಯೇ ಗಲಾಟೆ ಮಾಡಿಕೊಂಡ ಘಟನೆ ರವಿವಾರ ಮಧ್ಯಾಹ್ನ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕುಂದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣೇಶ್ ಎಕ್ಸ್ಪ್ರೆಸ್ ಬಸ್ ಪಡುಬಿದ್ರಿ ನಿಲ್ದಾಣಕ್ಕೆ ಬಂದಾಗ ಟೈಮಿಂಗ್ ವಿಚಾರದಲ್ಲಿ ಬಸ್ನ ನಿರ್ವಾಹಕ ಸಮೀವುಲ್ಲಾ ಎಂಬಾತನಿಗೆ ಟೈಂ ಕೀಪರ್ ಮಹೇಶ್ ಎಂಬಾತ ಬೈಯ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ.
ಇದಕ್ಕೆ ಪ್ರತಿಯಾಗಿ ಟೈಂ ಕೀಪರ್ ಮಹೇಶ್ ಎಂಬಾತ ಪ್ರತಿದೂರು ನೀಡಿದ್ದು ಟೈಂ ಕೀಪರ್ ತಾನು ಟೈಮಿಂಗ್ ವಿಚಾರದಲ್ಲಿ ಬೇಗ ಹೋಗುವಂತೆ ತಿಳಿಸಿದಾಗ ನಿರ್ವಾಹಕ ಸಮೀವುಲ್ಲಾ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೈಯ್ದು, ಹೊಡೆದು, ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾನೆ.
ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಾಗಿದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…