ಪಡುಬಿದ್ರಿ : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ದ ಇಲ್ಲಿ ಪ್ರತಿಭಟನೆಯನ್ನು ನಡೆಸಲು ನಾವೆಲ್ಲ ಸೇರಿದ್ದೇವೆ, ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಅದಕ್ಕೆ ಕಾರಣ ಇಷ್ಟೇ ಮುಂದಿನ ದಿನದಲ್ಲಿ ಇಂಥಹ ಘಟನೆಗಳು ಭಾರತದಲ್ಲಿ ನಡೆಯಬಾರದು ಎಂಬ ನಿಟ್ಟಿನಲ್ಲಿ ಎಲ್ಲೆಡೆ ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸುತ್ತಾ ಅಧರ್ಮಿಯರಿಗೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಅನಿವಾರ್ಯ ಸ್ಥಿತಿ ಬಂದರೆ ಬಾಂಗ್ಲಕ್ಕೂ ತೆರಳಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟಿಸಲು ಮತ್ತು ಹೋರಾಡಲು ಸಿದ್ದ ಎಂದರು.
ಈ ಸಂದರ್ಭ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ತಾಲೂಕು ಅಧ್ಯಕ್ಷ ಶಶಿಧರ ಹೆಗ್ಡೆ ಅಡ್ವೆ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಸೂಡಾ, ಪಡುಬಿದ್ರಿ ವಲಯಾಧ್ಯಕ್ಷ ಪ್ರತೀಕ್ ನಂದಿಕೂರು, ಶಿರ್ವ ವಲಯ ಅಧ್ಯಕ್ಷ ರಕ್ಷಿತ್, ಹಿಂದು ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನೀತಾ ಗುರುರಾಜ್, ಶಿವಪ್ರಸಾದ್ ಶೆಟ್ಟಿ ಎರ್ಮಾಳ್, ಕೃಷ್ಣ ಕಂಚಿನಡ್ಕ, ಸುರೇಶ್ ಪೂಜಾರಿ ಪಾದೆಬೆಟ್ಟು, ಪಡುಬಿದ್ರಿ ವಲಯ ಉಪಾಧ್ಯಕ್ಷ ಉಮಾನಾಥ್ ಮೆಂಡನ್, ವಲಯ ಪ್ರಧಾನ ಕಾರ್ಯದರ್ಶಿ ಸುಹಾಸ್ ನಟವರ್ಯ, ಪಲಿಮಾರು ಘಟಕಾಧ್ಯಕ್ಷ ರಾಘವೇಂದ್ರ ಸುವರ್ಣ, ಉಪಾಧ್ಯಕ್ಷ ರಿತೇಶ್ ದೇವಾಡಿಗ, ನಂದಿಕೂರು ಘಟಕಾಧ್ಯಕ್ಷ ನಿತಿನ್ ಶೆಟ್ಟಿ, ಉಪಾಧ್ಯಕ್ಷ ಸುಕೇಶ್ ಕುಲಾಲ್, ಕಂಚಿನಡ್ಕ ಘಟಕಾಧ್ಯಕ್ಷ ಶಂಕರ್, ಉಪಾಧ್ಯಕ್ಷ ಶಿವು ಮತ್ತು ನೂರಕ್ಕೂ ಮಿಕ್ಕಿದ ಕಾರ್ಯಕರ್ತರು ಭಾಗವಹಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…