Featured

ಪಡುಬಿದ್ರಿ: ಬಾಲಕರು ರೈಲು ಹಳಿಗಳ ಕಬ್ಬಿಣದ ಲಾಕ್‌ ತೆಗೆದ ಪ್ರಕರಣ : ಸಮಗ್ರ ತನಿಖೆಗೆ ಸಂಸದ ಕೋಟ ಆಗ್ರಹ – vishwanews24

ಪಡುಬಿದ್ರಿ: ಬಾಲಕರು ರೈಲು ಹಳಿಗಳ ಕಬ್ಬಿಣದ ಲಾಕ್‌ ತೆಗೆದ ಪ್ರಕರಣ : ಸಮಗ್ರ ತನಿಖೆಗೆ ಸಂಸದ ಕೋಟ ಆಗ್ರಹ

ಪಡುಬಿದ್ರಿ: ಅವರಾಲು ಮಟ್ಟು ಪ್ರದೇಶದಲ್ಲಿ ರೈಲು ಹಳಿಗಳ ಕಬ್ಬಿಣದ ಲಾಕ್‌ಗಳನ್ನು ಬಾಲಕರು ತೆಗೆದ ಪ್ರಕರಣದ ಕುರಿತು ರಾಜ್ಯ ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ -ಚಿಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.

ಅವರಾಲುಮಟ್ಟುವಿನ ಪ್ರಕರಣಕ್ಕೆ ಸಂಬಂಧಿಸಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎನ್ನುವುದರ ಕುರಿತಾಗಿ ಉನ್ನತ ಪೊಲೀಸ್ ಅಧಿಕಾರಿಗಳಿಂದ ಸಮಗ್ರ ತನಿಖೆಯಾಗಬೇಕು. ಪ್ರಕರಣಗಳ ಹಿಂದಿನ ಶಕ್ತಿ ಯಾವುದು ಎಂಬುದು ಸೂಕ್ತ ತನಿಖೆಯ ಮೂಲಕವೇ ಹೊರ ಬರಬೇಕು ಎಂದರು.

ಗ್ಯಾಂಗ್‌ಮೆನ್ ವಿರುದ್ಧವಾಗಿ ದಾಖಲಾದ ಪ್ರಕರಣವನ್ನು ಪರಿಶೀಲನೆ ಗೊಳಪಡಿಸಿ ಆತ ನಿರಪರಾಧಿಯಾಗಿದ್ದರೆ, ಆತನ ವಿರುದ್ಧದ ಪ್ರಕರಣಗಳನ್ನು ವಾಪಾಸು ಪಡೆಯಬೇಕು. ಬಾಲಕರನ್ನು ದಂಡ ವಿಧಿಸಿ ಬಿಡಲಾಗಿದೆ ಎಂದು ಅವರು ತಿಳಿಸಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಶರಣ್ ಕುಮಾರ್ ಮಟ್ಟು, ಮಂಡಲ ಬಿಜೆಪಿ ವಕ್ತಾರ ನವೀನ್ ಎಸ್.ಕೆ., ರಂಜನ್ ಕೋಟ್ಯಾನ್ ಹರ್ಷಿತ್ ಪೂಜಾರಿ ಆರ್‌ಸಿಎಫ್ ನಿರೀಕ್ಷಕ ಮಧುಸೂದನ್ ಉಪಸ್ಥಿತರಿದ್ದರು.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

17 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

25 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

56 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago