ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ಟೋಲ್ ನಿರ್ಮಾಣವಾಗುವ ಸ್ಥಳದಲ್ಲಿ ಬುಧವಾರ ನಡೆಯಿತು.
ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು ಭಾಗಿಯಾಗಿದ್ದರು.
ಪ್ರತಿಭಟನೆ ಉದ್ದೇಶಿಸಿ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ” ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಸರ್ಕಾರ ಇದ್ದಾಗ ಪಡುಬಿದ್ರಿಯಿಂದ ಕಾರ್ಕಳವರೆಗಿನ ರಸ್ತೆ ನಿರ್ಮಾಣವಾಗಿತ್ತು ಅದೇ ಸಮಯದಲ್ಲಿ ಇದಕ್ಕೆ ಟೋಲ್ ಹಾಕುವ ಯೋಜನೆ ಕೂಡ ಆಗಿತ್ತು ಆದರೆ ಈಗ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪಯತ್ನವನ್ನು ಟೋಲ್ ಹೋರಾಟದಲ್ಲಿರುವ ಬಿಜೆಪಿ ಪಕ್ಷ ಮಾಡುತ್ತಿದೆ ಎಂದರು.
ಇವತ್ತು ಕಾಂಗ್ರೆಸ್ ಪಕ್ಷದ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಬೇಕೆಂಬ ದೃಷ್ಟಿಯಿಂದ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಬೆಂಗಳೂರಿಗೆ ನಿಯೋಗ ತೆರಳಿ ರಾಜ್ಯದ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಟೋಲ್ ರದ್ದು ಮಾಡಲು ಮನವಿ ಸಲ್ಲಿಸಲಾಗುವುದು ಎಂದರು.
ಪಡುಬಿದ್ರಿ ಭಾಗದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಕಾಂಗ್ರೆಸ್ ಪಾರ್ಟಿ ಅದಕ್ಕೆ ಬೆಂಬಲ ನೀಡುತ್ತಾ ಬಂದಿದೆ ಆದರೆ ಬಿಜೆಪಿ ಅದರಲ್ಲಿ ವ್ಯವಹಾರ ನಡೆಸುತ್ತಿದ್ದಾರೆ, ಲ್ಯಾಂಡ್ ಮಾಫಿಯ,ಹಫ್ತಾ ವಸೂಲು,ಕಾಂಟ್ಯಾಕ್ಟ್ ಲಾಭಿ ನಡೆಸುತ್ತಿದ್ದಾರೆಂದು ಆರೋಪ ನಡೆಸಿದರು.ಪ್ರಮುಖರಾದ ಮುನಿಯಾಲ್ ಉದಯ ಶೆಟ್ಟಿ, ದಲಿತ ಮುಖಂಡ ಶೇಖರ್ ಹೆಜ್ಮಾಡಿ,ಮಾತಾಡಿದರು.
ಅಶೋಕ್ ಕುಮಾರ್ ಕೊಡವೂರು,ರಮೇಶ್ ಕಾಂಚನ್,ಬೆಳಪು ದೇವಿ ಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರೀಶ್ ಕಿಣಿ ಮೊದಲದವರು ಇದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…