Featured

ಪಡುಬಿದ್ರಿ : ಬಿಜೆಪಿಯ ಕನಸಿನ ಕೂಸು ಪಡುಬಿದ್ರಿ ಟೋಲ್ ನಿರ್ಮಾಣ ರದ್ದು ಮಾಡಿಯೇ ಸಿದ್ದ : ಸೊರಕೆ – vishwanews24

ಯಾವುದೇ ಪ್ರತಿಭಟನೆ ನಡೆದರೂ ಕಾಂಗ್ರೆಸ್ ನಿಂದ  ಬೆಂಬಲ , ಆದರೆ  ಬಿಜೆಪಿ ಅದರಲ್ಲಿ ವ್ಯವಹಾರ : ಸೊರಕೆ

ಕಂಚಿನಡ್ಕದ ಟೋಲ್ ಗೇಟ್ ನಿರ್ಮಾಣಕ್ಕೆ ಬ್ರೇಕ್ ಹಾಕಲು ಸೊರಕೆ ನೇತೃತ್ವದ ನಿಯೋಗ ರಾಜ್ಯ ರಾಜಧಾನಿಗೆ ..

ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು ಭಾಗಿ vishwanews24

ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ಟೋಲ್ ನಿರ್ಮಾಣವಾಗುವ ಸ್ಥಳದಲ್ಲಿ ಬುಧವಾರ ನಡೆಯಿತು.

ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು ಭಾಗಿಯಾಗಿದ್ದರು.

ಪ್ರತಿಭಟನೆ ಉದ್ದೇಶಿಸಿ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ” ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಸರ್ಕಾರ ಇದ್ದಾಗ ಪಡುಬಿದ್ರಿಯಿಂದ ಕಾರ್ಕಳವರೆಗಿನ ರಸ್ತೆ ನಿರ್ಮಾಣವಾಗಿತ್ತು ಅದೇ ಸಮಯದಲ್ಲಿ ಇದಕ್ಕೆ ಟೋಲ್ ಹಾಕುವ ಯೋಜನೆ ಕೂಡ ಆಗಿತ್ತು ಆದರೆ ಈಗ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪಯತ್ನವನ್ನು ಟೋಲ್ ಹೋರಾಟದಲ್ಲಿರುವ ಬಿಜೆಪಿ ಪಕ್ಷ ಮಾಡುತ್ತಿದೆ ಎಂದರು.

ಇವತ್ತು ಕಾಂಗ್ರೆಸ್ ಪಕ್ಷದ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಬೇಕೆಂಬ ದೃಷ್ಟಿಯಿಂದ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಬೆಂಗಳೂರಿಗೆ ನಿಯೋಗ ತೆರಳಿ ರಾಜ್ಯದ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಟೋಲ್ ರದ್ದು ಮಾಡಲು ಮನವಿ ಸಲ್ಲಿಸಲಾಗುವುದು ಎಂದರು.

ಪಡುಬಿದ್ರಿ ಭಾಗದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಕಾಂಗ್ರೆಸ್ ಪಾರ್ಟಿ ಅದಕ್ಕೆ ಬೆಂಬಲ ನೀಡುತ್ತಾ ಬಂದಿದೆ ಆದರೆ ಬಿಜೆಪಿ ಅದರಲ್ಲಿ ವ್ಯವಹಾರ ನಡೆಸುತ್ತಿದ್ದಾರೆ, ಲ್ಯಾಂಡ್ ಮಾಫಿಯ,ಹಫ್ತಾ ವಸೂಲು,ಕಾಂಟ್ಯಾಕ್ಟ್ ಲಾಭಿ ನಡೆಸುತ್ತಿದ್ದಾರೆಂದು ಆರೋಪ‌ ನಡೆಸಿದರು.ಪ್ರಮುಖರಾದ ಮುನಿಯಾಲ್ ಉದಯ ಶೆಟ್ಟಿ, ದಲಿತ ಮುಖಂಡ ಶೇಖರ್ ಹೆಜ್ಮಾಡಿ,ಮಾತಾಡಿದರು.

ಅಶೋಕ್ ಕುಮಾರ್ ಕೊಡವೂರು,ರಮೇಶ್ ಕಾಂಚನ್,ಬೆಳಪು ದೇವಿ ಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರೀಶ್ ಕಿಣಿ ಮೊದಲದವರು ಇದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago