ಪಡುಬಿದ್ರಿ: ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್ ಶೇಖ್ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ ಪುಸಲಾಯಿಸಿ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿನ ತನ್ನ ರೂಮಿಗೆ ಕರೆದೊಯ್ದಿದ್ದ ಆರೋಪಿಯು ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರಗೈದಿದ್ದ.
ಅನಂತರದಲ್ಲಿ ಬಾಲಕಿಯು ಹೊಟ್ಟೆ ನೋವು ಎನ್ನುತ್ತಾ ಅಳುತ್ತಿದ್ದಳು. ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಪಡುಬಿದ್ರಿಯ ಪ್ರಾ.ಆ. ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದರು. ಬಳಿಕ ಬಾಲಕಿಯನ್ನು ಪಡುಬಿದ್ರಿ ಪೊಲೀಸ್ ಠಾಣಾ ಮಹಿಳಾ ಪೇದೆ, ಬಾಲಕಿಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿಯ ಮೇಲೆ ಅತ್ಯಾಚಾರ ಆಗಿರುವುದು ಆಸ್ಪತ್ರೆಯಲ್ಲಿ ದೃಢಪಟ್ಟಿದೆ.
ಇನ್ನು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…