ಉಡುಪಿ: ಉಡುಪಿಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಜು.21ರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯಲು ಆರಂಭಿಸಿದೆ.
ರಾತ್ರಿಯ ವೇಳೆ ಮಳೆ ಮತ್ತಷ್ಟು ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಸೇರಿದಂತೆ ಇತರ ಭಾಗದಲ್ಲೂ ಮಳೆ ಸುರಿತಾ ಇರುವ ಬಗ್ಗೆ ಮಾಹಿತಿ ಇದೆ.
ಜಿಲ್ಲೆಯ ಮೀನುಗಾರರು ಮೀನುಗಾರಿಕೆ ತೆರಳಾಗದೇ ದಡದಲ್ಲೇ ನಾಡದೋಣಿಗಳನ್ನು ಲಂಗರು ಹಾಕಿದ ದೃಶ್ಯಗಳು ಕಂಡು ಬಂದಿವೆ.
ಇನ್ನು ಇತ್ತ ಕಡಲ ತಡಿಯಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದ್ದು, ಪಡುಬಿದ್ರಿಯ ಕಡಲತಡಿಯಲ್ಲಿ ಮತ್ತೆ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದೆ.
ಬೀಚ್ನಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಾದ ರಂಗವೇದಿಕೆ, ಇಂಟರ್ಲಾಕ್, ಟೈಲ್ಸ್ ಗಳು, ಶೌಚಾಲಯಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.
ಇತ್ತೀಚೆಗಷ್ಟೇ ಸಂಭವಿಸಿದ ಕಡಲ್ಕೊರೆತದಿಂದ ಇಲ್ಲಿನ ಕಡಲ ತೀರದ ಅನೇಕ ಪ್ರದೇಶಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿತ್ತು.
ಈಗ ಪಡುಬಿದ್ರೆ ಬೀಚ್ ನಲ್ಲಿ ಮತ್ತೆ ಕಡಲ್ಕೊರೆತ ಉಂಟಾಗಿದೆ.
ಈ ಬಗ್ಗೆ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರವನ್ನು ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…