ಉಡುಪಿ: ಉಡುಪಿಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಜು.21ರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯಲು ಆರಂಭಿಸಿದೆ.
ರಾತ್ರಿಯ ವೇಳೆ ಮಳೆ ಮತ್ತಷ್ಟು ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಸೇರಿದಂತೆ ಇತರ ಭಾಗದಲ್ಲೂ ಮಳೆ ಸುರಿತಾ ಇರುವ ಬಗ್ಗೆ ಮಾಹಿತಿ ಇದೆ.
ಜಿಲ್ಲೆಯ ಮೀನುಗಾರರು ಮೀನುಗಾರಿಕೆ ತೆರಳಾಗದೇ ದಡದಲ್ಲೇ ನಾಡದೋಣಿಗಳನ್ನು ಲಂಗರು ಹಾಕಿದ ದೃಶ್ಯಗಳು ಕಂಡು ಬಂದಿವೆ.
ಇನ್ನು ಇತ್ತ ಕಡಲ ತಡಿಯಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದ್ದು, ಪಡುಬಿದ್ರಿಯ ಕಡಲತಡಿಯಲ್ಲಿ ಮತ್ತೆ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದೆ.
ಬೀಚ್ನಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಾದ ರಂಗವೇದಿಕೆ, ಇಂಟರ್ಲಾಕ್, ಟೈಲ್ಸ್ ಗಳು, ಶೌಚಾಲಯಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.
ಇತ್ತೀಚೆಗಷ್ಟೇ ಸಂಭವಿಸಿದ ಕಡಲ್ಕೊರೆತದಿಂದ ಇಲ್ಲಿನ ಕಡಲ ತೀರದ ಅನೇಕ ಪ್ರದೇಶಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿತ್ತು.
ಈಗ ಪಡುಬಿದ್ರೆ ಬೀಚ್ ನಲ್ಲಿ ಮತ್ತೆ ಕಡಲ್ಕೊರೆತ ಉಂಟಾಗಿದೆ.
ಈ ಬಗ್ಗೆ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರವನ್ನು ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…