ಪಡುಬಿದ್ರಿ: ಬೈಕ್’ಗೆ ಟ್ಯಾಂಕರ್ ಡಿಕ್ಕಿ – ಸವಾರರಿಬ್ಬರು ಮೃತ್ಯು -Vishwanews24
ಪಡುಬಿದ್ರಿ: ಬೈಕ್’ಗೆ ಟ್ಯಾಂಕರ್ ಡಿಕ್ಕಿ – ಸವಾರರಿಬ್ಬರು ಮೃತ್ಯು
ಪಡುಬಿದ್ರಿ : ಉಚ್ಚಿಲದಲ್ಲಿ ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಪಲಿಮಾರು ಅವರಾಲು ಮಟ್ಟು ನಿವಾಸಿಗಳಾದ ಸುಬ್ರಹ್ಮಣ್ಯ (30) ಮತ್ತು ಗಿರೀಶ್ (26) ಮೃತಪಟ್ಟವರು. ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದು, ಮತ್ತೋರ್ವ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದು ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
