Featured

ಪಡುಬಿದ್ರಿ : ಬೈಕ್‌ ಅಡ್ಡಗಟ್ಟಿ ಹಲ್ಲೆ ; ದರೋಡೆಗೆ ಯತ್ನ: ಪ್ರಕರಣ ದಾಖಲು – vishwanews24

ಪಡುಬಿದ್ರಿ : ಬೈಕ್‌ ಅಡ್ಡಗಟ್ಟಿ ಹಲ್ಲೆ ; ದರೋಡೆಗೆ ಯತ್ನ: ಪ್ರಕರಣ ದಾಖಲು

ಪಡುಬಿದ್ರಿ: ಕಟಪಾಡಿಯ ಇಚ್ಛಿತ್‌ ಶೆಟ್ಟಿ (24) ಅವರ ಮೋಟಾರು ಬೈಕನ್ನು ಪಲಿಮಾರು ಪೇಟೆಯಲ್ಲಿ ನ. 22ರಂದು ತಡರಾತ್ರಿ ತಡೆದು ನಿಲ್ಲಿಸಿದ್ದ ಮಹೇಶ ಹಾಗೂ ಇನ್ನಿಬ್ಬರು ಆರೋಪಿಗಳು ಇಚ್ಛಿತ್‌ ಅವರ ಮೊಬೈಲ್‌ ಹಾಗೂ ಚಿನ್ನದ ಸರವನ್ನು ಕಸಿಯಲು ಯತ್ನ ನಡೆಸಿದ್ದಾರೆ.

ಮಂಗಳೂರಿಗೆ ಕಾರ್ಯಕ್ರಮವೊಂದರ ನಿಮಿತ್ತ ತೆರಳಿದ್ದ ಇಚ್ಛಿತ್‌ ಅವರು ತಮ್ಮ ಗೆಳೆಯ ಸಂಕೇತ್‌ನನ್ನು ಅವರ ಊರು ಬಳ್ಕುಂಜೆಯಲ್ಲಿ ಇಳಿಸಿ ಬೈಕಿನಲ್ಲಿ ಕಟಪಾಡಿಗೆ ಮರಳುತ್ತಿದ್ದರು. ರಾತ್ರಿ 11.30ರ ವೇಳೆಗೆ ಪಲಿಮಾರು ಜಂಕ್ಷನ್‌ ತಲುಪಿದಾಗ ಆರೋಪಿಗಳು ಕೈ ಅಡ್ಡ ಹಿಡಿದು ಬೈಕನ್ನು ನಿಲ್ಲಿಸಿದ್ದಾರೆ. ಬೈಕ್‌ ಕೀ ತೆಗೆದ ಮಹೇಶ ರಸ್ತೆ ಬದಿಗೆ ಬಿಸಾಡಿದ್ದುದನ್ನು ಪ್ರಶ್ನಿಸಿದಾಗ ಇಚ್ಛಿತ್‌ ಮೇಲೆ ಕೈಯಿಂದ ಹಾಗೂ ಆತನ ಹೆಲ್ಮೆಟ್‌ ಮೂಲಕ ಹೊಡೆದು ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ತುಳಿದಿದ್ದಾರೆ.

ಇಚ್ಛಿತ್‌ ತನ್ನ ಅಕ್ಕನಿಗೆ ವೀಡಿಯೋ ಕಾಲ್‌ ಮಾಡುತ್ತಿದ್ದಾಗ ಆರೋಪಿಗಳು ಮೊಬೈಲ್‌ ಕಿತ್ತುಕೊಂಡು ನೆಲಕ್ಕೆಸೆದಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇಚ್ಛಿತ್‌ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರವನ್ನು ಕಸಿದಿದ್ದಾರೆ. ಅದು ತುಂಡಾಗಿ ರಸ್ತೆಗೆ ಬಿದ್ದಾಗ ಇಚ್ಛಿತ್‌ ಅದನ್ನು ಎತ್ತಿಕೊಂಡಿದ್ದಾರೆ. ಬಳಿಕ ಆರೋಪಿಗಳು ಇಚ್ಛಿತ್‌ನನ್ನು ತಮ್ಮ ಕಾರಿಗೆ ಹಾಕಿಕೊಳ್ಳಲು ಯತ್ನವನ್ನೂ ನಡೆಸಿದ್ದಾರೆ. ಆ ವೇಳೆಗೆ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಬಂದಾಗಿ ಆರೋಪಿಗಳು ಕಾರು ಹತ್ತಿ ಪರಾರಿಯಾಗಿದ್ದರು. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago