ಪಡುಬಿದ್ರಿ: ಕಟಪಾಡಿಯ ಇಚ್ಛಿತ್ ಶೆಟ್ಟಿ (24) ಅವರ ಮೋಟಾರು ಬೈಕನ್ನು ಪಲಿಮಾರು ಪೇಟೆಯಲ್ಲಿ ನ. 22ರಂದು ತಡರಾತ್ರಿ ತಡೆದು ನಿಲ್ಲಿಸಿದ್ದ ಮಹೇಶ ಹಾಗೂ ಇನ್ನಿಬ್ಬರು ಆರೋಪಿಗಳು ಇಚ್ಛಿತ್ ಅವರ ಮೊಬೈಲ್ ಹಾಗೂ ಚಿನ್ನದ ಸರವನ್ನು ಕಸಿಯಲು ಯತ್ನ ನಡೆಸಿದ್ದಾರೆ.
ಮಂಗಳೂರಿಗೆ ಕಾರ್ಯಕ್ರಮವೊಂದರ ನಿಮಿತ್ತ ತೆರಳಿದ್ದ ಇಚ್ಛಿತ್ ಅವರು ತಮ್ಮ ಗೆಳೆಯ ಸಂಕೇತ್ನನ್ನು ಅವರ ಊರು ಬಳ್ಕುಂಜೆಯಲ್ಲಿ ಇಳಿಸಿ ಬೈಕಿನಲ್ಲಿ ಕಟಪಾಡಿಗೆ ಮರಳುತ್ತಿದ್ದರು. ರಾತ್ರಿ 11.30ರ ವೇಳೆಗೆ ಪಲಿಮಾರು ಜಂಕ್ಷನ್ ತಲುಪಿದಾಗ ಆರೋಪಿಗಳು ಕೈ ಅಡ್ಡ ಹಿಡಿದು ಬೈಕನ್ನು ನಿಲ್ಲಿಸಿದ್ದಾರೆ. ಬೈಕ್ ಕೀ ತೆಗೆದ ಮಹೇಶ ರಸ್ತೆ ಬದಿಗೆ ಬಿಸಾಡಿದ್ದುದನ್ನು ಪ್ರಶ್ನಿಸಿದಾಗ ಇಚ್ಛಿತ್ ಮೇಲೆ ಕೈಯಿಂದ ಹಾಗೂ ಆತನ ಹೆಲ್ಮೆಟ್ ಮೂಲಕ ಹೊಡೆದು ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ತುಳಿದಿದ್ದಾರೆ.
ಇಚ್ಛಿತ್ ತನ್ನ ಅಕ್ಕನಿಗೆ ವೀಡಿಯೋ ಕಾಲ್ ಮಾಡುತ್ತಿದ್ದಾಗ ಆರೋಪಿಗಳು ಮೊಬೈಲ್ ಕಿತ್ತುಕೊಂಡು ನೆಲಕ್ಕೆಸೆದಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇಚ್ಛಿತ್ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರವನ್ನು ಕಸಿದಿದ್ದಾರೆ. ಅದು ತುಂಡಾಗಿ ರಸ್ತೆಗೆ ಬಿದ್ದಾಗ ಇಚ್ಛಿತ್ ಅದನ್ನು ಎತ್ತಿಕೊಂಡಿದ್ದಾರೆ. ಬಳಿಕ ಆರೋಪಿಗಳು ಇಚ್ಛಿತ್ನನ್ನು ತಮ್ಮ ಕಾರಿಗೆ ಹಾಕಿಕೊಳ್ಳಲು ಯತ್ನವನ್ನೂ ನಡೆಸಿದ್ದಾರೆ. ಆ ವೇಳೆಗೆ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಬಂದಾಗಿ ಆರೋಪಿಗಳು ಕಾರು ಹತ್ತಿ ಪರಾರಿಯಾಗಿದ್ದರು. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …