ಪಡುಬಿದ್ರಿ: ಕಟಪಾಡಿಯ ಇಚ್ಛಿತ್ ಶೆಟ್ಟಿ (24) ಅವರ ಮೋಟಾರು ಬೈಕನ್ನು ಪಲಿಮಾರು ಪೇಟೆಯಲ್ಲಿ ನ. 22ರಂದು ತಡರಾತ್ರಿ ತಡೆದು ನಿಲ್ಲಿಸಿದ್ದ ಮಹೇಶ ಹಾಗೂ ಇನ್ನಿಬ್ಬರು ಆರೋಪಿಗಳು ಇಚ್ಛಿತ್ ಅವರ ಮೊಬೈಲ್ ಹಾಗೂ ಚಿನ್ನದ ಸರವನ್ನು ಕಸಿಯಲು ಯತ್ನ ನಡೆಸಿದ್ದಾರೆ.
ಮಂಗಳೂರಿಗೆ ಕಾರ್ಯಕ್ರಮವೊಂದರ ನಿಮಿತ್ತ ತೆರಳಿದ್ದ ಇಚ್ಛಿತ್ ಅವರು ತಮ್ಮ ಗೆಳೆಯ ಸಂಕೇತ್ನನ್ನು ಅವರ ಊರು ಬಳ್ಕುಂಜೆಯಲ್ಲಿ ಇಳಿಸಿ ಬೈಕಿನಲ್ಲಿ ಕಟಪಾಡಿಗೆ ಮರಳುತ್ತಿದ್ದರು. ರಾತ್ರಿ 11.30ರ ವೇಳೆಗೆ ಪಲಿಮಾರು ಜಂಕ್ಷನ್ ತಲುಪಿದಾಗ ಆರೋಪಿಗಳು ಕೈ ಅಡ್ಡ ಹಿಡಿದು ಬೈಕನ್ನು ನಿಲ್ಲಿಸಿದ್ದಾರೆ. ಬೈಕ್ ಕೀ ತೆಗೆದ ಮಹೇಶ ರಸ್ತೆ ಬದಿಗೆ ಬಿಸಾಡಿದ್ದುದನ್ನು ಪ್ರಶ್ನಿಸಿದಾಗ ಇಚ್ಛಿತ್ ಮೇಲೆ ಕೈಯಿಂದ ಹಾಗೂ ಆತನ ಹೆಲ್ಮೆಟ್ ಮೂಲಕ ಹೊಡೆದು ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ತುಳಿದಿದ್ದಾರೆ.
ಇಚ್ಛಿತ್ ತನ್ನ ಅಕ್ಕನಿಗೆ ವೀಡಿಯೋ ಕಾಲ್ ಮಾಡುತ್ತಿದ್ದಾಗ ಆರೋಪಿಗಳು ಮೊಬೈಲ್ ಕಿತ್ತುಕೊಂಡು ನೆಲಕ್ಕೆಸೆದಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇಚ್ಛಿತ್ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರವನ್ನು ಕಸಿದಿದ್ದಾರೆ. ಅದು ತುಂಡಾಗಿ ರಸ್ತೆಗೆ ಬಿದ್ದಾಗ ಇಚ್ಛಿತ್ ಅದನ್ನು ಎತ್ತಿಕೊಂಡಿದ್ದಾರೆ. ಬಳಿಕ ಆರೋಪಿಗಳು ಇಚ್ಛಿತ್ನನ್ನು ತಮ್ಮ ಕಾರಿಗೆ ಹಾಕಿಕೊಳ್ಳಲು ಯತ್ನವನ್ನೂ ನಡೆಸಿದ್ದಾರೆ. ಆ ವೇಳೆಗೆ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಬಂದಾಗಿ ಆರೋಪಿಗಳು ಕಾರು ಹತ್ತಿ ಪರಾರಿಯಾಗಿದ್ದರು. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…