ಪಡುಬಿದ್ರಿ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.
ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ.
ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.
ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…