Featured

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ; ನಕಲಿ ರಶೀದಿ ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ : ಡಿಸಿಗೆ ದೂರು – Vishwanews24

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ; ನಕಲಿ ರಶೀದಿ ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ : ಡಿಸಿಗೆ ದೂರು

ಪಡುಬಿದ್ರಿ: ಪಡುಬಿದ್ರಿಯಲ್ಲಿರುವ ಅಂತಾರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್‌ ಬೀಚ್‌ನ ನಿರ್ವಹಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಬ್ಲೂಫ್ಲ್ಯಾಗ್‌ ಬೀಚ್‌ನ ಹಲವು ಸಿಬಂದಿ ಗುರುವಾರ ಕರ್ತವ್ಯಕ್ಕೆ ಗೈರು ಹಾಜರಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಿಬಂದಿ ದೂರು ಸಲ್ಲಿಸಿದರು. ಕಳೆದ 15 ತಿಂಗಳುಗಳಿಂದ ಕೆಲಸದ ವಾತಾವರಣ ಸರಿಯಿಲ್ಲ. ನಕಲಿ ರಶೀದಿಗಳನ್ನು ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೀಗೆ ವಸೂಲಿ ಮಾಡಿದ ಹಣವು ಪ್ರವಾಸೋದ್ಯಮ ಇಲಾಖೆ ಖಾತೆಗೆ ಬದಲಾಗಿ ವ್ಯಕ್ತಿಯೋರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಿಗೆ ಈ ಹಿಂದೆ ದೂರು ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗದ ಕಾರಣ ಮತ್ತೊಮ್ಮೆ ದೂರು ನೀಡುತ್ತಿದ್ದೇವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ಪತ್ರಕ್ಕೆ 22 ಮಂದಿ ಗುತ್ತಿಗೆ ಉದ್ಯೋಗಿಗಳು ಸಹಿ ಮಾಡಿದ್ದಾರೆ.

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ – Vishwanews24

ಬ್ಲೂಫ್ಲ್ಯಾಗ್‌ ಬೀಚ್‌ನ ಕರ್ತವ್ಯದಲ್ಲಿ ಒಟ್ಟು 31 ಉದ್ಯೋಗಿಗಳಾಗಿದ್ದೇವೆ. ಸೂಪರ್‌ವೈಸರ್‌ಗಳಿಬ್ಬರು ನಮಗೆ ಜೀವ ಭಯವುಂಟು ಮಾಡುತ್ತಿದ್ದು, ನಮಗೆ ನ್ಯಾಯ ಸಿಗಬೇಕೆಂದು ಅವರು ಆಗ್ರಹಿಸಿದ್ದಾರೆ. ಇನ್ನು ಸಿಬಂದಿಯ ಆರೋಪವನ್ನು ತಳ್ಳಿ ಹಾಕಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಕ್ಲಿಫರ್ಡ್‌ ಲೋಬೋ, ಬೀಚ್‌ನ ಕೆಲಸಗಾರರ ನಡುವೆ ಆಂತರಿಕ ಭಿನ್ನಾಭಿಪ್ರಾಯ ಮೂಡಿರುವುದೇ ಈ ಆರೋಪಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗಿದ್ದು, ಮಾಸಿಕ ವೇತನ ಕೂಡಾ ಸಕಾಲದಲ್ಲೇ ಪಾವತಿಯಾಗುತ್ತಿದೆ. ಬೋಟಿಂಗ್, ಪ್ರವೇಶ ಶುಲ್ಕ ಮುಂತಾದ ಆದಾಯಗಳಿಗೆ ರಶೀದಿ ವ್ಯವಸ್ಥೆಯೂ ಇದ್ದು, ಪ್ರತಿ ದಿನದ ಆದಾಯ ಮರುದಿನ ಇಲಾಖೆಯ ಖಾತೆಗೆ ಬರುತ್ತದೆ. ಆದಾಗ್ಯೂ ಅಸಮಾಧಾನಗೊಂಡಿರುವ ಉದ್ಯೋಗಿಗಳು ದಾಖಲೆ ನೀಡಿದರೆ ಪರಿಶೀಲನೆ ನಡೆಸಿ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

ಮಂಗಳೂರು: ಬಜ್ಪೆಯ ದಸರಾ ಶೋಭಾಯಾತ್ರೆಯಲ್ಲಿ ಆಕರ್ಷಣೆ ಪಡೆದ ಯೋಗಿ ಆದಿತ್ಯನಾಥ್ ಟ್ಯಾಬ್ಲೊ – Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago