Featured

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ; ನಕಲಿ ರಶೀದಿ ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ : ಡಿಸಿಗೆ ದೂರು – Vishwanews24

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ; ನಕಲಿ ರಶೀದಿ ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ : ಡಿಸಿಗೆ ದೂರು

ಪಡುಬಿದ್ರಿ: ಪಡುಬಿದ್ರಿಯಲ್ಲಿರುವ ಅಂತಾರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್‌ ಬೀಚ್‌ನ ನಿರ್ವಹಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಬ್ಲೂಫ್ಲ್ಯಾಗ್‌ ಬೀಚ್‌ನ ಹಲವು ಸಿಬಂದಿ ಗುರುವಾರ ಕರ್ತವ್ಯಕ್ಕೆ ಗೈರು ಹಾಜರಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಿಬಂದಿ ದೂರು ಸಲ್ಲಿಸಿದರು. ಕಳೆದ 15 ತಿಂಗಳುಗಳಿಂದ ಕೆಲಸದ ವಾತಾವರಣ ಸರಿಯಿಲ್ಲ. ನಕಲಿ ರಶೀದಿಗಳನ್ನು ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೀಗೆ ವಸೂಲಿ ಮಾಡಿದ ಹಣವು ಪ್ರವಾಸೋದ್ಯಮ ಇಲಾಖೆ ಖಾತೆಗೆ ಬದಲಾಗಿ ವ್ಯಕ್ತಿಯೋರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಿಗೆ ಈ ಹಿಂದೆ ದೂರು ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗದ ಕಾರಣ ಮತ್ತೊಮ್ಮೆ ದೂರು ನೀಡುತ್ತಿದ್ದೇವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ಪತ್ರಕ್ಕೆ 22 ಮಂದಿ ಗುತ್ತಿಗೆ ಉದ್ಯೋಗಿಗಳು ಸಹಿ ಮಾಡಿದ್ದಾರೆ.

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ – Vishwanews24

ಬ್ಲೂಫ್ಲ್ಯಾಗ್‌ ಬೀಚ್‌ನ ಕರ್ತವ್ಯದಲ್ಲಿ ಒಟ್ಟು 31 ಉದ್ಯೋಗಿಗಳಾಗಿದ್ದೇವೆ. ಸೂಪರ್‌ವೈಸರ್‌ಗಳಿಬ್ಬರು ನಮಗೆ ಜೀವ ಭಯವುಂಟು ಮಾಡುತ್ತಿದ್ದು, ನಮಗೆ ನ್ಯಾಯ ಸಿಗಬೇಕೆಂದು ಅವರು ಆಗ್ರಹಿಸಿದ್ದಾರೆ. ಇನ್ನು ಸಿಬಂದಿಯ ಆರೋಪವನ್ನು ತಳ್ಳಿ ಹಾಕಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಕ್ಲಿಫರ್ಡ್‌ ಲೋಬೋ, ಬೀಚ್‌ನ ಕೆಲಸಗಾರರ ನಡುವೆ ಆಂತರಿಕ ಭಿನ್ನಾಭಿಪ್ರಾಯ ಮೂಡಿರುವುದೇ ಈ ಆರೋಪಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗಿದ್ದು, ಮಾಸಿಕ ವೇತನ ಕೂಡಾ ಸಕಾಲದಲ್ಲೇ ಪಾವತಿಯಾಗುತ್ತಿದೆ. ಬೋಟಿಂಗ್, ಪ್ರವೇಶ ಶುಲ್ಕ ಮುಂತಾದ ಆದಾಯಗಳಿಗೆ ರಶೀದಿ ವ್ಯವಸ್ಥೆಯೂ ಇದ್ದು, ಪ್ರತಿ ದಿನದ ಆದಾಯ ಮರುದಿನ ಇಲಾಖೆಯ ಖಾತೆಗೆ ಬರುತ್ತದೆ. ಆದಾಗ್ಯೂ ಅಸಮಾಧಾನಗೊಂಡಿರುವ ಉದ್ಯೋಗಿಗಳು ದಾಖಲೆ ನೀಡಿದರೆ ಪರಿಶೀಲನೆ ನಡೆಸಿ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

ಮಂಗಳೂರು: ಬಜ್ಪೆಯ ದಸರಾ ಶೋಭಾಯಾತ್ರೆಯಲ್ಲಿ ಆಕರ್ಷಣೆ ಪಡೆದ ಯೋಗಿ ಆದಿತ್ಯನಾಥ್ ಟ್ಯಾಬ್ಲೊ – Vishwanews24

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

6 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

8 hours ago