ಪಡುಬಿದ್ರಿ : ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಮೃತ ವ್ಯಕ್ತಿಯನ್ನು ಅಭಿಷೇಕ್ ಯಾನೆ ಅಭಿ (32) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯನ್ನು ನಡೆಸುತ್ತಿದ್ದರು.
ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಬಳಿ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದರು ತುರ್ತು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರಾಶಾಯಿಯಾಗಿ, ಕಾರು ನಜ್ಜುಗುಜ್ಜಾಗಿದೆ. ಈ ಸಂದರ್ಭ ವಿದ್ಯುತ್ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.
ಮೃತ ಅಭಿಷೇಕ್ ಅವರು ಪಂಪ್ ವೆಲ್ ಗೌಜಿ ಇವೆಂಟ್ಸ್ ಮಾಲಕರಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿದ್ದರು.
ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…