Featured

ಪಡುಬಿದ್ರಿ: ಮನೆಗೆ ನುಗ್ಗಿದ ಕಳ್ಳರು ; ಲಕ್ಷಾಂತರ. ಮೌಲ್ಯದ ಚಿನ್ನಾಭರಣ ಕಳವು – vishwanews24

ಪಡುಬಿದ್ರಿ: ಮನೆಗೆ ನುಗ್ಗಿದ ಕಳ್ಳರು ; ಲಕ್ಷಾಂತರ. ಮೌಲ್ಯದ ಚಿನ್ನಾಭರಣ ಕಳವು

ಪಡುಬಿದ್ರಿ : ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ.

ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ಮಂಗಳ ವಾರ ಸಂಜೆಯ ಹೋಗಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇವರ ಸೊಸೆ ತನ್ನ ತಾಯಿ ಮನೆಗೆ ಹೋಗಿದ್ದು, ಅವರ ಮಗ ದುಬೈಯಲ್ಲಿ ಇರುವುದಾಗಿ ತಿಳಿದುಬಂದಿದೆ.

ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲೆಸ್, 5 ಪವನ್ ತೂಕದ ಚಿನ್ನದ ನೆಕ್ಲೆಸ್, ಸುಮಾರು 3 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, ಸುಮಾರು 2.5 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, 15 ಪವನ್ ತೂಕದ ಬಂಗಾರದ ಬಳೆಗಳು, 3 ಪವನ್ ತೂಕದ ಬಂಗಾರದ ಬ್ರೇಸ್ಲೇಟ್, 1 ಪವನ್ ತೂಕದ ಚಿನ್ನದ ಉಂಗುರ, 3 ಪವನ್ ತೂಕದ ಚಿನ್ನದ ಉಂಗುರಗಳು ಸಹಿತ ಮುತ್ತಿನ ಮಣಿಯ ಚಿನ್ನದ ಸರ, ಸಣ್ಣ ಚಿನ್ನದ ಸರಗಳು, ಕಿವಿಯೋಲೆ ಸೇರಿದಂತೆ ಒಟ್ಟು 70 ಪವನ್ ತೂಕದ 48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50000 ರೂ. ಮೌಲ್ಯದ ರಾಡೋ ವಾಚನ್ನು ಕಳವುಗೈದಿದ್ದಾರೆ.

ಮನೆಯಲ್ಲಿ ಸಿಮ್ ಸಹಿತವಾದ ಸಿಸಿಟಿವಿ ಇದ್ದು ಅದನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ ಅದರ ಸಿಮ್ ಸಂದೇಶವು ಮಗನ ಸಿಮ್‌ನಲ್ಲಿ ದಾಖಲಾಗಿದೆ ಎನ್ನಲಾಗಿದೆ. ಸುತ್ತಮುತ್ತ ಹಲವು ಮನೆಗಳಿದ್ದು, ಇಂತಹ ವಸತಿ ಪ್ರದೇಶಕ್ಕೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಡಿವೈಎಸ್ಪಿ ಪ್ರಭು ಡಿ.ಟಿ., ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು ಸಹಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನ ದಳ, ವೈಜ್ಞಾನಿಕವಾಗಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago