Featured

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ

ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯ ಕುರಿತು ಸುರತ್ಕಲ್ ಬಂಟರ ಸಂಘದಲ್ಲಿ ಸಭೆಯನ್ನು ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಸಭೆಯಲ್ಲಿ ಹೊರೆಕಾಣಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ದಕ್ಷಿಣ ಕನ್ನಡ ಉಡುಪಿ ಕಾಸರಗೋಡು ಸಹಿತ ಬೇರೆ ಜಿಲ್ಲೆಗಳಿಂದಲೂ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ದೇವತಾ ಕಾರ್ಯಕ್ಕೆ ಹೊರೆಕಾಣಿಕೆಯನ್ನು ಕಳುಹಿಸಲು ಎಲ್ಲಾ ಬಂಟರ ಸಂಘಗಳಿಗೆ ಮನವಿ ಪತ್ರ‌ಬಂದಿರುತ್ತದೆ. ಈ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಸಂಘ ಕೂಡ ಬಹಳಷ್ಟು ಮುತುವರ್ಜಿ ವಹಿಸಿ ಇಂದಿನ ಸಭೆಯನ್ನು ಆಯೋಜಿಸಿದ್ದೀರಿ.‌

ಇದನ್ನೂ ಓದಿ:

ಕೆ ಪ್ರಕಾಶ್ ಶೆಟ್ಟಿಯವರ ಮೇಲಿನ ಅಭಿಮಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿದ್ದು, ಎಲ್ಲರೂ ಎಪ್ರಿಲ್ 26 ರಂದು ಭಾನುವಾರ ಸಂಜೆ 3 ಗಂಟೆಗೆ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ವಿನಂತಿಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿ ಹಾಗೂ ಪಡುಬಿದ್ರೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ಮಾತನಾಡಿ, ಅನ್ನಸಂತರ್ಪಣೆಗೆ ಬೇಕಾಗುವ ಸಾಮಾಗ್ರಿಗಳ ಕುರಿತು ಮಾಹಿತಿ ನೀಡಿದರು. ಎ. 26 ರಂದು ಭಾನುವಾರದಂದು ಪಡುಬಿದ್ರೆ ಪೇಟೆಯ ಗುಂಡ್ಲಾಡಿ ಕಟ್ಟೆಯಿಂದ ಸಂಜೆ 3 ಗಂಟೆಗೆ ಸರಿಯಾಗಿ ಶೋಭಾಯಾತ್ರೆ ಹೊರಡಲಿದೆ. ಈ ಕಾರ್ಯಕ್ರಮದಲ್ಲಿ ಸುರತ್ಕಲ್ ಬಂಟರ ಸಂಘದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು, ಮಹಿಳೆಯರು, ಯುವಕರು ಭಾಗವಹಿಸುವಂತೆ ವಿನಂತಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಗಿರೀಶ್ ಎಂ. ಶೆಟ್ಟಿ ಕಟೀಲು, ಸರೋಜ ಟಿ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ, ಕಿರಣ್ ಪ್ರಸಾದ್ ರೈ, ಪುಷ್ಪರಾಜ ಶೆಟ್ಟಿ ಕುಡುಂಬೂರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ:

ವೇದಿಕೆಯಲ್ಲಿ ಸಂಘದ ನಿಕಟ ಪೂರ್ವಾಧ್ಯಕ್ಷರಾದ ಲೋಕಯ್ಯ ಎಂ. ಶೆಟ್ಟಿ ಮುಂಚೂರು, ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜ, ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಗುರುಪುರ ಬಂಟರ ಮಾತೃಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

ಉಲ್ಲಾಸ್ ಶೆಟ್ಟಿಯವರು ಸ್ವಾಗತಿಸಿ ಹಸಿರು ಹೊರೆಕಾಣಿಕೆ ಸಮರ್ಪಣೆಯಲ್ಲಿ ಸುರತ್ಕಲ್ ಬಂಟರ ಸಂಘದ ಎಲ್ಲಾ ಸದಸ್ಯರು ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಲೀಲಾಧರ ಶೆಟ್ಟಿ ಕಾರ್ಯಕ್ರಮ‌ ನಿರೂಪಿಸಿ, ವಂದಿಸಿದರು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago