Featured

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು – Vishwanews24

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ: ನನ್ನ ವಿರುದ್ದ ಪದೇ ಪದೇ ಮೇಲಾಧಿಕಾರಿಗಳಿಗೆ ದೋಷಪೂರಿತ ಹೆಗೆತನ ಸಾಧಿಸುವ‌ ಮತ್ತು ವರ್ಗಾವಣೆ ಮಾಡವೇಕೆನ್ನುವ ಉದ್ದೇಶದಿಂದ ಸುಳ್ಳು ದೂರು‌ ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ವಿರುದ್ದ ಮುದರಂಗಡಿ ಗ್ರಾಮ ಪಂಚಾಯಿತಿ‌ ಪಿಡಿಒ ಸುರೇಶ್ ದೂರು ನೀಡಿದ್ದಾರೆ.

ನಾನು 2020ರ ಅಕ್ಟೋಬರ್ 5ರಿಂದ ಮುದರಂಗಡಿ ಗ್ರಾಮದ ಮುದರಂಗಡಿ ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದೇನೆ. ಗ್ರಾಮ‌ ಪಂಚಾಯತ್ನ ಉಪಾಧ್ಯಕ್ಷ‌ ಶರತ್ ಶೆಟ್ಟಿ, ಅಧ್ಯಕ್ಷೆ ಯೋಗಿನಿ ಶೆಟ್ಟಿ ಮತ್ತು ಶಿವರಾಮ ಭಂಡಾರಿಯವರು ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಸಾಧಿಸುವ ನಿಟ್ಟಿನಲ್ಲಿ ನನ್ನ ಮೇಲೆ ಒತ್ತಡ ಹೇರಿ, ಕಾನೂನುಬಾಹಿರ ಕೃತ್ಯವೆಸಗಲು ಪ್ರೇರೇಪಿಸಿರುವುದನ್ನು ಒಪ್ಪದಿರುವಾಗ ಎರಡು ಬಾರಿ ಸುಳ್ಳುದೂರುಗಳನ್ನು ನೀಡಿ ಕಾರ್ಯ ಚಟುವಟಿಕೆಗಳ ಮೇಲೆ ಇಲಾಖಾಧಿಕಾರಿಗಳು ತನಿಖೆಜಿಲ್ಲಾಧಿಕಾರಿ ನಡೆಸುವಂತೆ ಮಾಡಿದ್ದಾರೆ.

ಪಡುಬಿದ್ರಿ : ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ – Vishwanews24

ಈ ಬಗ್ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ, ಸಹಾಯಕ ಕಾರ್ಯದರ್ಶಿ, ಅಧೀಕ್ಷಕರು, ಅಭಿವೃದ್ಧಿ ಶಾಖೆ ರವರು ಮುದರಂಗಡಿ ಗ್ರಾಮ ಪಂಚಾಯತಿಗೆ ಆಗಮಿಸಿ ನಡೆಸಿದ ತನಿಖೆಯಲ್ಲಿ ಆರೋಪ ಸುಳ್ಳೆಂದು ಸಾಬೀತಾಗಿತ್ತು. ನಂತರದ ದಿನಗಳಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶರತ್ ಶೆಟ್ಟಿ, ಅಧ್ಯಕ್ಷೆ ಯೋಗಿನಿ ಶೆಟ್ಟಿ, ನಮ್ಮ ಮಾತಿಗೆ ಬೆಲೆ ಕೊಡದಿದ್ದರೆ, ಸಿಬ್ಬಂದಿಗಳ ವೇತನ, ಸಾದಿಲ್ವಾರು ಬಿಲ್ಲುಗಳಿಗೆ ಸಹಿ ಹಾಕಲು ಬಿಡುವುದಿಲ್ಲ. ಇಷ್ಟ ಇದ್ದರೆ ಕೆಲಸ ಮಾಡು, ಬೇರೆ ಅಧಿಕಾರಿಯ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಮತ್ತು ಗ್ರಾಮ ಪಂಚಾಯತಿಗೆ ನಾಳೆಯಿಂದ ಬೀಗಹಾಕುತ್ತೇವೆ ಎಂದು ಬೆದರಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆ ವಿದ್ಯಾನಗರದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲೂ ತಾನೊಬ್ಬ ಅಧಿಕಾರಿಯಾಗಿದ್ದರೂ ಹೀಯಾಳಿಸಿ ಏಕವಚನದಲ್ಲಿ ನಿಂದಿಸಿದ್ದಾರೆ. ಎರಡೆರಡು ಬಾರಿ ವರ್ಗಾವಣೆ ಆದೇಶವನ್ನು ಮಾಡಿಸಿರುತ್ತಾರೆ. ಅಲ್ಲದೇ ಪಂಚಾಯತಿಯಲ್ಲಿ ಸೇವೆ ಮಾಡಲು ಬಿಡುವುದಿಲ್ಲ ಎನ್ನುವ ದುರುದ್ದೇಶದಿಂದ ಇತರೆ 7 ಜನ ಸದಸ್ಯರನ್ನು ಒಟ್ಟುಗೂಡಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಎದುರು ಪ್ರತಿಭಟನೆ ನಡೆಸಿ ಮೌಖಿಕ ದೂರು ನೀಡಿದ್ದಾರೆ.

ಇದರಿಂದ ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ. ಮೇಲಾಧಿಕಾರಿಗಳಿಗೆ ದ್ವೇಷಪೂರಿತ ಹಗೆತನ ಸಾಧಿಸುವ ಮತ್ತು ವರ್ಗಾವಣೆ ಮಾಡಬೇಕೆನ್ನುವ ಉದ್ದೇಶದಿಂದ ಪದೇ ಪದೇ ಸುಳ್ಳು ದೂರುಗಳನ್ನು ನೀಡುತ್ತಾ ತೊಂದರೆ ನೀಡಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ : 100 ಕಾಲು ಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ..

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago