Featured

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು – Vishwanews24

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು

ಪಡುಬಿದ್ರಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಮೂರು ಸೊಸೈಟಿಗಳಲ್ಲಿ ಅಡವಿಟ್ಟ ಲಕ್ಷಾಂತರ ರೂ. ಸಾಲ ಪಡೆದು ಪಾವತಿಸದೆ ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

ಆರೋಪಿಗಳನ್ನುಪಡುಬಿದ್ರಿ ಕಂಚಿನಡ್ಕದ ರಾಘವೇಂದ್ರ ಮಠದ ಬಳಿಯ ನಿವಾಸಿ ರಾಜೀವ್ ಹಾಗೂ ಆತನ ಪತ್ನಿ ಸ್ನೇಹಲತಾ ಎಂದು ಗುರುತಿಸಲಾಗಿದೆ.

ಇವರು ಪಡುಬಿದ್ರಿಯ ಎಸ್.ಕೆ.ಜಿ.ಐ. ಕೋ-ಅಪರೇಟಿವ್ ಸೊಸೈಟಿಯಲ್ಲಿ 2022ರ ಸೆ.1ರಿಂದ ಒಟ್ಟು 182 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ಅಡವಿಟ್ಟು ಸೊಸೈಟಿಗೆ ನಂಬಿಸಿ 8,08,000ರೂ. ಸಾಲವನ್ನು ಪಡೆದಿದ್ದರು. ಈ ಬಗ್ಗೆ ಸಂಶಯಗೊಂಡ ಸೊಸೈಟಿಯವರು 2024ರ ಫೆ.26ರಂದು ಆರೋಪಿಗಳು ಅಡವಿಟ್ಟ ಚಿನ್ನಾಭರಣಗಳ ಪರಿಶೀಲಿಸಿದಾಗ ನಕಲಿ ಎಂಬುದಾಗಿ ಕಂಡು ಬಂದಿದೆ. ಹೀಗೆ ಆರೋಪಿಗಳು 8,08,000ರೂ. ಸಾಲವನ್ನು ಪಡೆದು ಮರುಪಾವತಿಸದೇ ಸೊಸೈಟಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

ಅದೇ ರೀತಿ ಇವರು ಉಚ್ಚಿಲದ ಎಸ್‌ಸಿಡಿಸಿಸಿ ಬ್ಯಾಂಕ್ ಉಚ್ಚಿಲ ಶಾಖೆಯಲ್ಲಿ 2023ರ ಮಾ.4ರಿಂದ ಒಟ್ಟು 72.200 ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಅಡವಿಟ್ಟು 2,86,000ರೂ. ಸಾಲವನ್ನು ಪಡೆದಿದ್ದರು. ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಡಿ.28 ರಂದು ಏಲಂ ಪ್ರಕ್ರಿಯೆ ನಡೆಸಿದ್ದು, ಬಿಡ್ಡುದಾರ ಬಾಬುರಾಯ ಆಚಾರ್ಯ ಎಂಬವರು 3,18,680ರೂ.ಗೆ ಈ ಚಿನ್ನಾಭರಣಗಳನ್ನು ಪಡೆದಿದ್ದರು. ಬಳಿಕ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ. ಹೀಗೆ ಆರೋಪಿಗಳು ಸೊಸೈಟಿಗೆ 2,86,000 ಸಾಲವನ್ನು ಪಡೆದು ಮರು ಪಾವತಿಸದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಈ ದಂಪತಿ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ಒಟ್ಟು 231 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ 10,29,000ರೂ. ಮತ್ತು ಸೊಸೈಟಿಯ ಸಿಟಿ ಶಾಖೆಯಲ್ಲಿ ಒಟ್ಟು 188.600ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 9,04,100ರೂ. ಸಾಲವನ್ನು ಪಡೆದು ಮರುಪಾವತಿಸದೇ ಬ್ಯಾಂಕಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago