Featured

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು – Vishwanews24

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು

ಪಡುಬಿದ್ರಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಮೂರು ಸೊಸೈಟಿಗಳಲ್ಲಿ ಅಡವಿಟ್ಟ ಲಕ್ಷಾಂತರ ರೂ. ಸಾಲ ಪಡೆದು ಪಾವತಿಸದೆ ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

ಆರೋಪಿಗಳನ್ನುಪಡುಬಿದ್ರಿ ಕಂಚಿನಡ್ಕದ ರಾಘವೇಂದ್ರ ಮಠದ ಬಳಿಯ ನಿವಾಸಿ ರಾಜೀವ್ ಹಾಗೂ ಆತನ ಪತ್ನಿ ಸ್ನೇಹಲತಾ ಎಂದು ಗುರುತಿಸಲಾಗಿದೆ.

ಇವರು ಪಡುಬಿದ್ರಿಯ ಎಸ್.ಕೆ.ಜಿ.ಐ. ಕೋ-ಅಪರೇಟಿವ್ ಸೊಸೈಟಿಯಲ್ಲಿ 2022ರ ಸೆ.1ರಿಂದ ಒಟ್ಟು 182 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ಅಡವಿಟ್ಟು ಸೊಸೈಟಿಗೆ ನಂಬಿಸಿ 8,08,000ರೂ. ಸಾಲವನ್ನು ಪಡೆದಿದ್ದರು. ಈ ಬಗ್ಗೆ ಸಂಶಯಗೊಂಡ ಸೊಸೈಟಿಯವರು 2024ರ ಫೆ.26ರಂದು ಆರೋಪಿಗಳು ಅಡವಿಟ್ಟ ಚಿನ್ನಾಭರಣಗಳ ಪರಿಶೀಲಿಸಿದಾಗ ನಕಲಿ ಎಂಬುದಾಗಿ ಕಂಡು ಬಂದಿದೆ. ಹೀಗೆ ಆರೋಪಿಗಳು 8,08,000ರೂ. ಸಾಲವನ್ನು ಪಡೆದು ಮರುಪಾವತಿಸದೇ ಸೊಸೈಟಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

ಅದೇ ರೀತಿ ಇವರು ಉಚ್ಚಿಲದ ಎಸ್‌ಸಿಡಿಸಿಸಿ ಬ್ಯಾಂಕ್ ಉಚ್ಚಿಲ ಶಾಖೆಯಲ್ಲಿ 2023ರ ಮಾ.4ರಿಂದ ಒಟ್ಟು 72.200 ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಅಡವಿಟ್ಟು 2,86,000ರೂ. ಸಾಲವನ್ನು ಪಡೆದಿದ್ದರು. ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಡಿ.28 ರಂದು ಏಲಂ ಪ್ರಕ್ರಿಯೆ ನಡೆಸಿದ್ದು, ಬಿಡ್ಡುದಾರ ಬಾಬುರಾಯ ಆಚಾರ್ಯ ಎಂಬವರು 3,18,680ರೂ.ಗೆ ಈ ಚಿನ್ನಾಭರಣಗಳನ್ನು ಪಡೆದಿದ್ದರು. ಬಳಿಕ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ. ಹೀಗೆ ಆರೋಪಿಗಳು ಸೊಸೈಟಿಗೆ 2,86,000 ಸಾಲವನ್ನು ಪಡೆದು ಮರು ಪಾವತಿಸದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಈ ದಂಪತಿ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ಒಟ್ಟು 231 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ 10,29,000ರೂ. ಮತ್ತು ಸೊಸೈಟಿಯ ಸಿಟಿ ಶಾಖೆಯಲ್ಲಿ ಒಟ್ಟು 188.600ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 9,04,100ರೂ. ಸಾಲವನ್ನು ಪಡೆದು ಮರುಪಾವತಿಸದೇ ಬ್ಯಾಂಕಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

6 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago