ಪಡುಬಿದ್ರಿ : ಇಲ್ಲಿನ ರಾಜಕೀಯ ಧುರೀಣ, ಸಮಾಜಸೇವಕ ಎಸ್.ಪಿ ಉಮರ್ ಫಾರೂಖ್ ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿಯಾಗಿರುವ 60 ವರ್ಷದ ಹಾಜಿ ಎಸ್.ಪಿ. ಉಮರ್ ಫಾರೂಖ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೃತರು ಪತ್ನಿ, ಮೂರು ಹೆಣ್ಣು, ಒಂದು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮದ್ಯಾಹ್ನ ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಧಾರ್ಮಿಕ, ಸಾಂಸ್ಕøತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದ ಉಮರ್ ಫಾರೂಖ್ ಅವರು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿ, ಪಡುಬಿದ್ರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ನ ಜಿಲ್ಲಾಧ್ಯಕ್ಷರಾಗಿ ಹಾಗೂ ಎಸ್.ವೈ.ಎಸ್ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇದರ ಜೊತೆಗೆ ಪಡುಬಿದ್ರಿ ಜುಮ್ಮಾ ಮಸೀದಿ ಸದಸ್ಯರಾಗಿದ್ದ ಇವರು, ಜನತಾದಳದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.
ಇದನ್ನೂ ಓದಿ: ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ ; ತಾತ್ಕಾಲಿಕ ಮಾರ್ಪಾಡು : ಎನ್ ಶಶಿಕುಮಾರ್ – Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…