ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿ ವಿರುದ್ಧ ಪಡುಬಿದ್ರಿ ಪಂಚಾಯತ್ ವತಿಯಿಂದ ಬೃಹತ್ ಪ್ರತಿಭಟನೆ -Vishwanews24
ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿ ವಿರುದ್ಧ ಪಡುಬಿದ್ರಿ ಪಂಚಾಯತ್ ವತಿಯಿಂದ ಬೃಹತ್ ಪ್ರತಿಭಟನೆ.
ಕಾಪು: ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿಯ ಅಪೂರ್ಣ ಕಾಮಗಾರಿಯ ವಿರುದ್ಧ ಪಡುಬಿದ್ರಿ ಪಂಚಾಯತ್ ಹಾಗೂ ವಿವಿಧ ಸಂಘಟನೆಯ ಜಂಟಿಯಾಗಿ ಪಡುಬಿದ್ರಿ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪಂಚಾಯತ್ ಉಪಾಧ್ಯಕ್ಷ ವೈ .ಸುಕುಮಾರ್ ಮಾತಾಡಿ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಮಾತಾಡಿ ” ಪರಿಪೂರ್ಣವಾಗದ ಕಾಮಗಾರಿ ಪೂರ್ಣಗೊಳಿಸದೆ ಇದ್ದಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದರು.
ಕಾರು ಮಾಲಕ ಸಂಘದ ಅಧ್ಯಕ್ಷ ಆಗ್ರಹಿಸುತ್ತಾ” ನವೋದಯ ಕಂಪನೆ ಜನರಿಗೆ ಮೋಸ ಮಾಡುತ್ತಿದೆ ,ಜನಸಾಮಾನ್ಯರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಇರಾದೆ ಜಿಲ್ಲಾಧಿಕಾರಿಗೆ ಇದೆ ಎಂದಾದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುವುದು ಎಂದರು.
ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ನವೀನ್ಚಂದ್ರ ಸುವರ್ಣ ಅಡ್ವೆ,ದಿನೇಶ್ ಮುದರಂಗಡಿ,ಸಂತೋಷ್ ಶೆಟ್ಟಿ,ಗ್ರಾಮ ಪಂಚಾಯತ್ ಅಧ್ಯಕ್ಷೆ ದಮಯಂತಿಅಮೀನ್,ತಾಲೂಕು ಪಂಚಾಯತ್ ಅಧ್ಯಕ್ಷ ನೀತಾ ಗುರುರಾಜ್ ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತಿತರಿದ್ದರು.
