ಪಡುಬಿದ್ರೆ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ಆಟ ಆಡುತ್ತ ರೈಲು ಹಳಿಯ ಬಳಿ ದೊರೆತ ಕಬ್ಬಿಣದ ತುಂಡನ್ನು ಹೆಕ್ಕಿದ್ದರು ಎನ್ನಲಾಗಿದೆ.
ಇದನ್ನು ನೋಡಿದ ಗ್ಯಾಂಗ್ಮ್ಯಾನ್ ಬಾಲಕರನ್ನು ಹಿಡಿದು, ಕೋಲಿನಿಂದ ಒಬ್ಬನ ತಲೆಗೆ ಹಾಗೂ ಮತ್ತೋರ್ವನ ಕಾಲಿಗೆ ಹೊಡೆದಿದ್ದಾನೆ. ಅಲ್ಲದೆ ಇಡೀ ಘಟನೆಯ ವೀಡಿಯೋವನ್ನು ಮಾಡಿ, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…