Featured

ಪಡುಬಿದ್ರಿ:  ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ಪಡುಬಿದ್ರಿ ಬಂಟರ ಸಂಘದ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಪಡುಬಿದ್ರಿ: ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿ ಅಮೋಘ. ಗ್ರಾಮ ದೇಗುಲದ ಜೀರ್ಣೋದ್ಧಾರಕ್ಕೆ ನಾವೆಲ್ಲ ಒಗ್ಗಟ್ಟಾಗೋಣ. ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರವೂ ಬೇಕು. ಬಂಟ ಸಮುದಾಯದ ಅಭ್ಯುತ್ಥಾನಕ್ಕಾಗಿ ಜೀವನ ಪರ್ಯಂತ ಸೇವೆ ಸಲ್ಲಿಸುವೆ ಎಂದು ಬೆಂಗಳೂರಿನ ಎಂಆರ್‌ಜಿ ಗ್ರೂಪ್‌ನ ಚೇರ್ಮನ್‌ ಮತ್ತು ಆಡಳಿತ ನಿರ್ದೇಶಕ ಡಾ| ಪ್ರಕಾಶ್‌ ಕೆ. ಶೆಟ್ಟಿ ಹೇಳಿದರು.

ಅವರು ರವಿವಾರ ಇಲ್ಲಿನ ಬಂಟರ ಭವನದಲ್ಲಿ ಪಡುಬಿದ್ರಿ ಬಂಟರ ಸಂಘ, ಸಿರಿಮುಡಿ ದತ್ತಿ ನಿಧಿ ಹಾಗೂ ಬಂಟ್ಸ್‌ ವೆಲ್ಫೆàರ್‌ ಟ್ರಸ್ಟ್‌ಗಳ ಸಹಭಾಗಿತ್ವದಲ್ಲಿ ನಡೆದ ಸೋಶಿಯಲ್‌ ವೆಲ್ಫೆರ್‌ ಪ್ರೋಗ್ರಾಂ ಮತ್ತು ವಿದ್ಯಾರ್ಥಿವೇತನ ವಿತರಣೆ ಸಮಾರಂಭದಲ್ಲಿ ತಮಗೆ ನೀಡಿದ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಬಂಟ್ಸ್‌ ಸಂಘದ ಅಧ್ಯಕ್ಷ ಸಿಎ ಅಶೋಕ್‌ ಶೆಟ್ಟಿ ಮಾತನಾಡಿ, ಸಮಾಜದ ಉನ್ನತಿಗೆ ನಮ್ಮ ಪ್ರಯತ್ನ ನಿರಂತರವಾಗಿರಬೇಕು ಎಂದರು.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ವಿಧಾನಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ ಮಾತನಾಡಿ, ನಾವು ಸಮಾಜದ ಋಣ ತೀರಿಸ‌ಬೇಕು. ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ತಾವೂ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು ಎಂದರು.

ಬಂಟಾಶ್ರಯ ಯೋಜನೆಗಾಗಿ ಇರಂದಾಡಿಯಲ್ಲಿ 6.83 ಎಕ್ರೆ ಸ್ಥಳವನ್ನಿತ್ತ ಮಾಜಿ ಯೋಧ ಮಾರ್ಕ್ಸ್ ಡಿ’ಸೋಜಾ ಅವರಿಗೆ, ಖರೀದಿಯ 1.70 ಕೋಟಿ ರೂ. ಮೊತ್ತವನ್ನು ಭರಿಸಲಿರುವ ಮುಂಬಯಿ ಬಂಟರ ಸಂಘದ ಅಧ್ಯಕ್ಷ, ಎಲ್ಲೂರು ಮಲ್ಲೆಟ್ಟು ಪರಾರಿ ಪ್ರವೀಣ್‌ ಭೋಜ ಶೆಟ್ಟಿ ಅವರ ಪರವಾಗಿ ಹಸ್ತಾಂತರಿಸಲಾಯಿತು.

ಸಿರಿಮುಡಿ ಕ್ರೆಡಿಟ್‌ ಕೋ ಆಪರೇಟಿವ್‌ ಸಂಘದ ಹಾಗೂ ಅಂತಾರಾಜ್ಯ ಬಂಟ ಕ್ರೀಡೋತ್ಸವದ ಕರಪತ್ರಗಳನ್ನು ಬಿಡುಗಡೆ, ಇಬ್ಬರಿಗೆ ಪ್ರಥಮ ಠೇವಣಿ ಪತ್ರ ವಿತರಣೆ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ನಡೆಯಿತು.

ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿಯ ಹೊಟೇಲ್‌ ಉದ್ಯಮಿ ಕರುಣಾಕರ ಅರ್‌. ಶೆಟ್ಟಿ, ಪಿಂಪ್ರಿ ಚಿಂಚ್‌ವಾಡ ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿ ಎರ್ಮಾಳು ಪುಚ್ಚೊಟ್ಟು ಸೀತಾರಾಮ ಶೆಟ್ಟಿ, ಬಂಟ್ಸ್‌ ವೆಲ್ಫೆàರ್‌ ಟ್ರಸ್ಟ್‌ನ ಅಧ್ಯಕ್ಷ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಯುವ ವಿಭಾಗದ ಅಧ್ಯಕ್ಷ ನವೀನ್‌ ಎನ್‌. ಶೆಟ್ಟಿ, ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು ಉಪಸ್ಥಿತರಿದ್ದರು.

ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಜಯ ಶೆಟ್ಟಿ ಪದ್ರ ಹಾಗೂ ಡಾ| ಮನೋಜ್‌ ಕುಮಾರ್‌ ಶೆಟ್ಟಿ ನಿರ್ವಹಿಸಿದರು. ಪ್ರಕಾಶ್‌ ಶೆಟ್ಟಿ ಪಡುಹಿತ್ಲು ವಂದಿಸಿದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

16 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

17 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

17 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

18 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

18 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

18 hours ago