ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ನಡ್ಸಾಲ್ ಪಾದೆಬೆಟ್ಟು ಗ್ರಾಮದಲ್ಲಿ ಅನಿಯಮಿತ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿರುವುದರ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಉಡಾಫೆತನದ ವಿರುದ್ಧ ಇಂದು ಪಡುಬಿದ್ರಿ ಮೆಸ್ಕಾಂ ಕಚೇರಿಗೆ ಪಡುಬಿದ್ರಿ ಗ್ರಾಮಸ್ಥರು ಮುತ್ತಿಗೆ ಹಾಕಿ ಮನವಿ ಮಾಡಿರುವ ಘಟನೆ ನಡೆದಿದೆ.
ವಾರದ ಪ್ರತಿ ಗುರುವಾರ ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕು ಗಂಟೆಯವರೆಗೆ ಪವರ್ ಕಟ್ ಆಗುತ್ತಿದ್ದು ಈ ಬಗ್ಗೆ ಕರೆ ಮಾಡಿ ವಿಚಾರ ತಿಳಿಯಲು ಪ್ರಯತ್ನಿಸದರೆ ಮೆಸ್ಕಾಂ ಅಧಿಕಾರಿಗಳು ಉಡಾಫೆಯ ಉತ್ತರ ನೀಡಿ ಕರೆ ಕಟ್ ಮಾಡುವುದು ಮಾತ್ರವಲ್ಲದೆ ಗದರಿಸುತ್ತಾರೆ ಎಂದು ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.
ಮೆಸ್ಕಾಂ ಅಧಿಕಾರಿಗಳು ಪ್ರತಿ ಗುರುವಾರ ಪವರ್ ಕಟ್ ಮಾಡುವ ಸಮಯದಲ್ಲಿ ಎಲ್ಲಾ ನಿರ್ವಹಣೆ ಕೆಲಸ ಮಾಡಿದರೆ ಇಂತಹ ಸಮಸ್ಯೆ ಎದುರಾಗಲು ಸಾದ್ಯವಿಲ್ಲ ಮಳೆಗಾಲ ಹೊರತಾಗಿಯೂ ಪವರ್ ಕಟ್ ನಡೆಯುತ್ತಿದ್ದಾಗ ನಿರ್ವಹಣೆ ಮಾಡಬೇಕಿತ್ತು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತಿಸಿದ್ದಲ್ಲಿ ಹೋರಾಟದ ಮುಖಾಂತರ ಮೆಸ್ಕಾಂ ಮುತ್ತಿಗೆ ಹಾಕುವ ಬಗ್ಗೆ ಎಚ್ಚರಿಕೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಸ್ಕಾಂ ಅಧಿಕಾರಿ”ಪ್ರಕೃತಿ ವಿಕೋಪ ಹಾಗೂ ಜೋರಾದ ಗಾಳಿ ಮಳೆಯಿಂದಾಗಿ ಈ ರೀತಿಯ ಸಮಸ್ಯೆಯಾಗುತ್ತಿದೆ ಅದಕ್ಕಾಗಿಯೇ ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ತಂಡ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು ಮಾತ್ರವಲ್ಲದೆ ಮೆಸ್ಕಾಂ ಡಿ.ಪಿ.ಆರ್ ಪ್ರಾಜೆಕ್ಟ್ ಸಂಬಂಧ ಪಟ್ಟ ಇಲಾಖೆಗೆ ಕಳುಹಿಸಲಾಗಿದ್ದು ಮುಂದಿನ ದಿನಗಳಲ್ಲಿ ಅದು ಸ್ಯಾಂಕ್ಷನ್ ಆದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…