ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ ಕಾರಣರಾಗಿದ್ದರು.
ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಅಭಿಷೇಕ್ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…