ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿರ್ದೇಶಕ ಮಂಡಳಿಗೆ ಅವಿರೋಧ ಆಯ್ಕೆ.
ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ಪಡುಬಿದ್ರಿ ಇದರ ನಿರ್ದೇಶಕ ಮಂಡಳಿಗೆ ಚುನಾವಣಾ ದಿನಾಂಕದಿಂದ ಮುಂದಿನ ಐದು ವರ್ಷಗಳ ಅವಧಿಯ ಚುನಾವಣೆಗೆ ಸಂಬಂಧಿಸಿದಂತೆ ನಾಮ ಪತ್ರ ಸಲ್ಲಿಸಿರುವ ಉಮೇದ್ವಾರರ ನಾಮ ಪತ್ರಗಳನ್ನು ಪರಿಶೀಲಿಸಿ ಸಂಘದ ಉಪವಿಧಿಯ ಪ್ರಕಾರ ಆಯ್ಕೆಯಾಗಬೇಕಾದ ಸ್ಥಾನಗಳ ಸಂಖ್ಯೆಗೆ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಯು ಸರಿಸಮಾನವಾಗಿರುವುದರಿಂದ ಹದಿಮೂರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವೈ.ಸುಧಿರ್ ಕುಮಾರ್ ಪಡುಬಿದ್ರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ಐದು ವರ್ಷದಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಮತ್ತು ಪಲಿಮಾರು ಹೆಜಮಾಡಿ ಶಾಖೆಯನ್ನು ಮೇಲ್ದರ್ಜೆಗೆ ಏರಿಸುವುದು ಮತ್ತು ಹೆಜಮಾಡಿಯ 15 ಸೆಂಟ್ಸ್ ಜಾಗದಲ್ಲಿ ದಾಸ್ತಾನು ಕೊಠಡಿ ನಿರ್ಮಾಣ ಮಾಡುವ ಯೋಜನೆ ಇದೆ ಎಂದರು.
ಸುಮಾರು ಐದು ಲಕ್ಷ ವೆಚ್ಚದಲ್ಲಿ ಪಡುಬಿದ್ರಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಶೀತಲೀಕರಣ ಘಟಕಕ್ಕೆ ಸಹಕಾರಿಸಲಾಗುವುದು ಎಂದರು.
ಸಾಮಾನ್ಯ ಕ್ಷೇತ್ರದಲ್ಲಿ ಶ್ರೀ ಸುಧಿರ್ ಕುಮಾರ್,ಶ್ರೀ ಗುರುರಾಜ್ ಪೂಜಾರಿ,ಶ್ರೀ ರಸ್ರೂಲ್.ವೈ.ಜಿ, ಶಿವರಾಮ್ ಎನ್ ಶೆಟ್ಟಿ,ವಾಸುದೇವ, ಮಾಧವ ಆಚಾರ್ಯ,ರಾಜಾರಾಮ್ ರಾವ್, ಮಹಿಳಾ ಮೀಸಲಾತಿಯಲ್ಲಿ ಶ್ರೀಮತಿ ಸುಚರಿತ,ಶ್ರೀಮತಿ ಕುಸುಮಾ ಎಮ್ ಕರ್ಕೇರಾ, ಹಿಂದುಳಿದ ವರ್ಗ (ಎ)ಮೀಸಲು,
ಶ್ರೀ ಗಿರೀಶ್ ಫಲಿಮಾರ್,ಪ್ರವರ್ಗ ಬಿ ಸ್ಟೇನಿ ಕ್ವಾಡ್ರಸ್,ಪ.ಜಾತಿ ಮೀಸಲು ಯಶವಂತ, ಪ.ಪಂಗಡ ಮೀಸಲು ಶ್ರೀಮತಿ ಕಾಂಚಾನ ಆಯ್ಕೆಯಾದ ಅಭ್ಯರ್ಥಿಗಳು.
ಪತ್ರಿಕಾಗೋಷ್ಠಿಯಲ್ಲಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಇದ್ದರು.
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…