ಪಡುಬಿದ್ರಿ: ಮೂರು ತಿಂಗಳ ಹಿಂದೆ ವಿದೇಶದಿಂದ ಬಂದಿದ್ದು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಎಂಬವರು ಸಾಲಬಾಧೆ ತಾಳಲಾರದೇ ತನ್ನ ರೂಮಿನ ಫ್ಯಾನ್ಗೆ ಚೂಡಿದಾರ್ ವೇಲ್ನಿಂದ ನೇಣು ಬಿಗಿದುಕೊಂಡು ಜ. 8ರ ಸಂಜೆಯ ವೇಳೆ ಸಾವನ್ನಪ್ಪಿದ್ದಾರೆ.
ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಇಂದು ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿಗೈದು ನೇರ ತಮ್ಮ ಬೆಡ್ರೂಮಿಗೆ ತೆರಳಿ ಬಾಗಿಲು ಭದ್ರಪಡಿಸಿಕೊಂಡು ಆತ್ಮಹತ್ಯೆಯನ್ನು ಅವರ ಗೈದುಕೊಂಡಿರುವುದಾಗಿ ಪೊಲೀಸ್ ಮಾಹಿತಿಗಳು ತಿಳಿಸಿವೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ಭಾರತೀಯ ದಂಡಸಂಹಿತೆಯನ್ವಯ ದಾಖಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…