ಪಡುಬಿದ್ರಿ: ಸಾಲ ವಾಪಸು ನೀಡಲಿಲ್ಲ ಎಂದು ಆರೋಪಿಸಿ ಮೂವರು ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಿವಾಸಿ, ಸಸಿಹಿತ್ಲು ಮೇಳದ ನಿತಿನ್ ಕುಮಾರ್ ಹಲ್ಲೆಗೊಳಗಾದವರು. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಆರೋಪಿಗಳಾಗಿದ್ದಾರೆ.
ಆರೋಪಿ ಸಚಿನ್ ಹಾಗೂ ಹಲ್ಲೆಗೊಳಗಾದ ನಿತಿನ್ ಇಬ್ಬರೂ ಯಕ್ಷಗಾನ ಕಲಾವಿದರಾಗಿದ್ದು, ಗೆಳೆಯರಾಗಿದ್ದರೂ, ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್ನನ್ನು ಪಾವಂಜೆ ಮೇಳದ ಯಕ್ಷ ಕಲಾವಿದನಾಗಿದ್ದ ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜ. 21ರಂದು ಕಂಬಳದ ಕೋಣಗಳ ಬಾರುಕೋಲಿನ ಮೂಲಕ ಸತತವಾಗಿ ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ. ಕಾಲಿನಿಂದ ತುಳಿದು ಕೈಯಿಂದ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೇಪರ್ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ. ಸಂಜೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಜ. 21ರ ರಾತ್ರಿ ವೇಳೆ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ಕೆಲಸ ಮಾಡಿದ್ದ ನಿತಿನ್, ಜ. 22ರಂದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪೊಲೀಸರುಗೆ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…