ಪಡುಬಿದ್ರಿ : ಕೋರಿಯರ್ನಲ್ಲಿ ಡ್ರಗ್ಸ್ ಕಳುಹಿಸಲಾಗುತ್ತಿದೆ ಎಂದು ಹೆದರಿಸಿ ಸೈಬರ್ ಕ್ರೈಮ್ ಅಧಿಕಾರಿಗಳೆಂದ ನಂಬಿಸಿ ಲಕ್ಷಾಂತರ ರೂ. ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಮೂಲದ ಪಡುಬಿದ್ರಿ ನಿವಾಸಿ ಟಿಯಾಗು (32) ಎಂಬವರಿಗೆ ಜ.17ರಂದು ಫೆಡ್ಎಕ್ಸ್ ಕೊರಿಯರ್ ಎಂಬ ಕಂಪೆನಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ ವ್ಯಕ್ತಿಯೊಬ್ಬ ಮಾತನಾಡಿದ್ದು, ನೀವು ಮುಂಬೈನಿಂದ ಇರಾನ್ಗೆ ಮಾಡಿದ ಕೊರಿಯರ್ ಡೆಲಿವರಿ ಆಗಲಿಲ್ಲ ಎಂದು ತಿಳಿಸಿದ್ದನು. ನಾವು ಯಾವುದೇ ಕೊರಿಯರ್ ಆರ್ಡರ್ ಮಾಡಿಲ್ಲ ಎಂದು ಹೇಳಿದ ಟಿಯಾಗು, ಅದರಲ್ಲಿ ಏನಿದೆ ಎಂದು ವಿಚಾರಿಸಿದರು.
ಆಗ ಆ ವ್ಯಕ್ತಿಯು, ಪಾರ್ಸೆಲ್ನಲ್ಲಿ ಅವಧಿ ಮುಗಿದ ಪಾಸ್ಪೋರ್ಟ್, ಕ್ರೆಡಿಟ್ ಕಾರ್ಡ್, ಟಾಯ್, ಎಂಬಿಡಿಎ 450ಗ್ರಾಂ ಇದೆ ಎಂದು ಹೇಳಿ, ನಿಮ್ಮ ಐಡಿ ದುರುಪಯೋಗ ಆಗಿದ್ದು, ಪಾರ್ಸೆಲ್ನಲ್ಲಿ ಎಂಬಿಡಿಎ ಡ್ರಗ್ನ್ನು ಅಕ್ರಮವಾಗಿ ಕಳುಹಿಸಲಾಗುತ್ತಿದೆ ಎಂದು ತಿಳಿಸಿದನು. ನೀವು ಸಿಕ್ಕಿಬಿದ್ದರೆ ನಿಮಗೆ ಜೀವನ ಪರ್ಯಂತ ಕೇಸು ದಾಖಲಾಗುತ್ತದೆ ಎಂದು ಹೇಳಿ, ದೂರು ಕೊಡಲು ಮುಂಬೈ ಸೈಬರ್ ಕ್ರೈಂ ಬ್ರಾಂಚ್ ಗೆ ಕರೆಯನ್ನು ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದನು.
ಒಂದು ನಿಮಿಷದ ನಂತರ ಇನ್ನೊರ್ವ ವ್ಯಕ್ತಿ ಮಾತನಾಡಿ ನಿಮ್ಮ ಅಕೌಂಟ್ ಚೆಕ್ ಮಾಡಬೇಕಾಗಿದೆ ಎಂದು ಹೇಳಿ ಟಿಯಾಗು ಅವರನ್ನು ನಂಬಿಸಿ, ಟಿಯಾಗು ಅವರ ಐಸಿಐಸಿಐ ಅಪ್ಲಿಕೇಶನ್ನಲ್ಲಿರುವ 15,62,921ರೂ. ಮೊತ್ತದ ಪರ್ಸನಲ್ ಲೋನ್ಗೆ ಕ್ಲಿಕ್ ಮಾಡಿಸಿದನು. ಆಗ ಬಂದ ಒಟಿಪಿಯನ್ನು ಪಡೆದಾಗ ಲೋನ್ ಹಣವು ಟಿಯಾಗು ಅವರ ಬ್ಯಾಂಕ್ ಖಾತೆಗೆ ಜಮಾ ಆಯಿತು. ನಂತರ ಆ ವ್ಯಕ್ತಿಯು ಸೈಬರ್ ಕ್ರೈಮ್ ಎಂದು ನಂಬಿಸಿ ಅಕೌಂಟ್ ನಂಬರ್ ನೀಡಿ ಟಿಯಾಗು ಖಾತೆಯಲ್ಲಿದ್ದ 15,62,921ರೂ. ಮೊತ್ತವನ್ನು ಆರ್.ಟಿ.ಜಿ.ಎಸ್. ಮೂಲಕ ವರ್ಗಾಯಿಸಿಕೊಂಡು ಮೋಸ ಮಾಡಿರುವುದಾಗಿ ದೂರಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…