ಉಡುಪಿ

ಪಡುಬಿದ್ರಿ ಸೊಸೈಟಿ 88 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ 130 ಕೋಟಿ ಠೇವಣಾತಿ ಹೊಂದಿದೆ: : ವೈ ಸುಧೀರ್ ಕುಮಾರ್

ಪಡುಬಿದ್ರಿ ಸೊಸೈಟಿ 88 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ 130 ಕೋಟಿ ಠೇವಣಾತಿ ಹೊಂದಿದೆ: : ವೈ ಸುಧೀರ್ ಕುಮಾರ್

ಪಡುಬಿದ್ರಿ : ಸಂಸ್ಥೆಯ ಅಭಿವೃದ್ಧಿಯ ಜೊತೆಗೆ ಸದಸ್ಯರಿಗೆ ಪ್ರೋತ್ಸಾಹ, ರೈತರು ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುವ ಮೂಲಕ ಪಡುಬಿದ್ರಿ ಸಹಕಾರಿ ವ್ಯವಸಾಯನಿಕ ಸೊಸೈಟಿಯು ಜನರ ಸಂಸ್ಥೆಯಾಗಿ ಬೆಳೆದು ನಿಂತಿದೆ ಇಂತಹ ಸೇವೆಯ ಮೂಲಕವೇ ವಾಣಿಜ್ಯ ಬ್ಯಾಂಕುಗಳಿಂದ ವಿಮುಖರಾಗಿ ಜನರು ಸಹಕಾರ ಸಂಸ್ಥೆಗಳತ್ತ ಮುಖ ಮಾಡುವಂತಹಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ ಬೆಂಗಳೂರು ಹಾಗೂ ದಾಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾಕ್ಟರ್ ಎಂ ಎಂ ರಾಜೇಂದ್ರ ಕುಮಾರ್ ಹೇಳಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಸ್ಥೆಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಸೊಸೈಟಿಯು ಪ್ರಗತಿಪಥದಲ್ಲಿ ಸಾಗುತ್ತಿದ್ದು ರೂಪಾಯಿ 130 ಕೋಟಿ ಠೇವಣಾತಿ ಹೊಂದಿದ್ದು 88 ಕೋಟಿ ರೂಪಾಯಿ ಸಾಲ ವಿತರಿಸಲಾಗಿದೆ ಪಲಿಮಾರು ಶಾಖ ಕಟ್ಟಡವು ವಿಶಾಲ ನವಿಕೃತ ಹವಾನಿಯಂತ್ರಿತ ಶಾಖೆಯೊಂದಿಗೆ ವಿಶಾಲವಾದ ಭದ್ರತಾ ಕೊಠಡಿ ಗ್ರಾಹಕರಿಗೆ ಸೌಲಭ್ಯ ಹೊಂದಿದ್ದು ಶಾತೆಯೊಂದಿಗೆ ಅಂಗಡಿ ಕೋಣೆಯನ್ನು ಕೂಡ ಹೊಂದಿದೆ ಇಲ್ಲಿ ಕೃಷಿ ಉಪಕರಣ ಮಾರಾಟ ಈ ಅಶ್ವ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ವಿಭಾಗವನ್ನು ಪ್ರಾರಂಭಿಸುವ ಯೋಜನೆ ಇದೆ ಇದಕ್ಕೆಲ್ಲ ಪಲಿಮಾರು ಗ್ರಾಮಸ್ಥರ ಸಹಕಾರ ಬೇಕಾಗಿದೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಅಖಿಲಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ಚಂದ್ರ ಡಿ ಸುವರ್ಣ, ಡಾ .ಬೆಳಪು ದೇವಿಪ್ರಸಾದ್ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ ಸೊಸೈಟಿಯ ಬೆಳವಣಿಗೆಯ ಬಗ್ಗೆ ಶುಭ ನುಡಿಗಳನ್ನಾಡಿದರು.

ಇದೇ ಸಂಧರ್ಭದಲ್ಲಿ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ ,ಭಾರತ ಕಬ್ಬಡಿ ತಂಡದ ಮಾಜಿ ನಾಯಕ ಶೇಖರ್ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಸಮಾಜ ಸೇವಕ ಶರಣ್ ಮಟ್ಟು ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್,ಸಹಕಾರ ಸಂಘಗಳ ಉಪನಿಬಂಧಕಿ ಶ್ರೀಮತಿ ಲಾವಣ್ಯ ಕೆ ಆರ್,ಸಹಾಯಕ ನಿಬಂಧಕಿ ಶ್ರೀಮತಿ ಸುಕನ್ಯ,ನಿವೃತ್ತ ಪಲಿಮಾರು ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ,ಪಲಿಮಾರು ಮಹಾಲಿಂಗೇಶ್ವರ ದೇಗುಲದ ಅರ್ಚಕ ಶ್ರೀನಿವಾಸ ಉಡುಪ,ಪಲಿಮಾರು ಸೈಂಟ್ ಪಿಯೂಸ್ ಚರ್ಚ್ ನ ಧರ್ಮಗುರು ಜೆರಾಲ್ಡ್ ಸಂದೀಪ್ ಡಿಮೆಲ್ಲೋ,ಮಾಜಿ ತಾ.ಪ ಸದಸ್ಯ ದಿನೇಶ್ ಕೋಟ್ಯಾನ್, ಡಾ ಪ್ರಭಾ ನಂಬಿಯಾರ್,ಹಾಜಿ ಎಂಪಿ ಶೇಖಬ್ಬ,ದಿನೇಶ್ ಪ್ರಭು,ಅಶೋಕ್ ಶೆಟ್ಟಿ, ಪಲಿಮಾರು ಶಾಖಾ ವ್ಯವಸ್ಥಾಪಕಿ ಶೋಭಾ ಎಚ್ ಪುತ್ರನ್, ಮೊದಲಾದವರು ಉಪಸ್ಥಿತರಿದ್ದರು.
ಪ್ರಕಾಶ್ ಶೆಟ್ಟಿ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿ ,ಗುರುರಾಜ್ ಪೂಜಾರಿ ವಂದಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

16 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

17 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

17 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

18 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

18 hours ago