ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು ಹಾಗೂ ಹೆಜಮಾಡಿ ಹಳೆ ರಾ.ಹೆ-66 ರಲ್ಲಿರುವ ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಶನಿವಾರ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಪಡುಬಿದ್ರಿ ಮತ್ತು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಟೋಲ್ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಟೋಲ್ ವಿರುದ್ಧ ಘೋಷಣೆ ಕೂಗಿ, ಟೋಲ್ ಪ್ಲಾಝಾಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಟೋಲ್ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ :
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ತಹಶೀಲ್ದಾರ್ ಅನಂತ ಶಂಕರ್ ಅವರು ಮನವಿ ಸ್ವೀಕರಿಸಿದರು.
ಈ ವೇಳೆ ಕಾಪು ಕ್ಷೇತ್ರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೃಷ್ಣ ಶೆಟ್ಟಿ, ಗುಲಾಮ್ ಅಹಮದ್, ಅಬ್ದುಲ್ ಅಜೀಜ್ ಹೆಜಮಾಡಿ, ನವೀನ್ ಎನ್. ಶೆಟ್ಟಿ, ಅಶ್ವಿನ್ ಕೋಟ್ಯಾನ್, ಸುಧೀರ್ ಕರ್ಕೇರ, ಮಹಮ್ಮದ್ ನಿಜಾಮುದ್ದೀನ್, ಶಾಂತಾಲತಾ ಶೆಟ್ಟಿ, ಅಬ್ದುಲ್ ಅಜೀಜ್ ಹೆಜಮಾಡಿ, ಫರ್ಜಾನ, ಅಶ್ವಿನಿ ಬಂಗೇರ, ಜೀನರಾಜ್ ಬಂಗೇರ, ದಯಾನಂದ್ ಹೆಜಮಾಡಿ, ಮೋಹನ್ ದಾಸ್ ಹೆಜಮಾಡಿ, ಪ್ರಬೋಧ್ ಚಂದ್ರ ಹೆಜಮಾಡಿ, ವಿಶಾಲ್ ಬಂಗೇರ, ದೀಕ್ಷಾ ಕೆ., ರಮೀಜ್ ಹುಸೇನ್, ಹಾಜಿ ಶೇಕಬ್ಬ ಕೋಟೆ, ಪ್ರಜ್ವಲ್ ಸಾಲ್ಯಾನ್, ತಸೀನ್ನ ಅರಾ, ಕೀರ್ತಿ ಕುಮಾರ್, ಹಸನಬ್ಬ ಕೋಡಿ, ಜ್ಯೋತಿ ಮೆನನ್, ಸುಚರಿತಾ ಅಮೀನ್, ಮಹಮ್ಮದ್ ಶರೀಫ್, ವಿಠಲ್ ಮಾಸ್ಟರ್, ಸನಾ ಇಬ್ರಾಹಿಮ್, ಶಿವರಾಮ್ ಶೆಟ್ಟಿ, ಸೌಮ್ಯ ರಿತೇಶ್, ರೋಶಾನ್ ಕಾಂಚನ್, ಶಾಫಿ ಎಂ. ಎಸ್., ಸಯ್ಯದ್ ನಿಜಾಮುದ್ದೀನ್ ಉಪಸ್ಥಿತರಿದ್ದರು.
ಇದನ್ನೂ ಓದಿ :
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…
ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು: ವಿದ್ಯಾರ್ಥಿಗಳ…