Featured

ಪಡುಬಿದ್ರಿ : ಜಿಲ್ಲಾಧಿಕಾರಿ ಆದೇಶದ ನಡುವೆಯೂ ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ  – vishwanews24

ಪಡುಬಿದ್ರಿ : ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಯವರು ಹೆಜಮಾಡಿ ಗ್ರಾಪಂ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದೆ.

ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಮಾಡುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ವಿರುದ್ಧದ ಹೋರಾಟ ಸಮಿತಿಯ ಪ್ರಮುಖರಾದ ಸ್ಥಳೀಯ ನಿವಾಸಿ ಗುಲಾಂ ಮುಹಮ್ಮದ್ ಅವರ ಖಾತೆಯಿಂದಲೇ ಹಣ ಸುಲಿಯಲಾಗಿದೆ. ಇದು ಗಮನಕ್ಕೆ ಬಂದ ತಕ್ಷಣ ವಾಹನವನ್ನು ಟೋಲ್ ಗೇಟಲ್ಲೇ ನಿಲ್ಲಿಸಿ ಪ್ರಶ್ನಿಸಿದ್ದಾರೆ.

ಸ್ಥಳಕ್ಕೆ ಬಂದ ಟೋಲ್ ಅಧಿಕಾರಿಗಳು ತಪ್ಪಿನ ಅರಿವಾಗಿ ಹಣವನ್ನು ಮರು ಪಾವತಿಸುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ಬಂದ ಪಡುಬಿದ್ರಿ ಎಸ್ಸೈ ಎಂ.ಎಸ್.ಪ್ರಸನ್ನ ಅವರು ಟೋಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಎಸ್ಸಿಯವರಿದ್ದ ಸಭೆಯಲ್ಲಿಯೇ ಸನೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಆದೇಶ ಮಾಡಿದರೂ ಅವರ ಆದೇಶವನ್ನು ಮೀರಿ ಟೋಲ್ ಪಡೆದಿರುವುದು ಸರಿಯಾದ ಕ್ರಮವಲ್ಲ, ಮುಂದೆ ಇದನ್ನು ಮುಂದುವರಿಸಿದ್ದಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಎಂಬುದಾಗಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗುಲಾಂ ಮುಹಮ್ಮದ್, ನಮ್ಮೆಲ್ಲರ ಹೋರಾಟದ ಫಲವಾಗಿ ಸ್ಥಳೀಯ ವಾಹನಗಳಿಗೆ ಟೋಲ್‌ ವಿನಾಯಿತಿ ಇದ್ದರೂ, ಕಳ್ಳ ಮಾರ್ಗದಲ್ಲಿ ಟೋಲ್ ವಸೂಲಿ ನಡೆಸಿದ್ದಾರೆ. ನನ್ನ ಗಮನಕ್ಕೆ ಬಂತು ನಾನು ಪ್ರತಿಭಟಿಸಿದೆ. ಅದೇ ಗಮನಕ್ಕೆ ಬಾರದ ಅದೆಷ್ಟೋ ವಾಹನಗಳಿಂದ ವಸೂಲಿ ನಡೆಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಎಚ್ಚರಗೊಳ್ಳಬೇಕಾಗಿದೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago