ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಯವರು ಹೆಜಮಾಡಿ ಗ್ರಾಪಂ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದೆ.
ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಮಾಡುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ವಿರುದ್ಧದ ಹೋರಾಟ ಸಮಿತಿಯ ಪ್ರಮುಖರಾದ ಸ್ಥಳೀಯ ನಿವಾಸಿ ಗುಲಾಂ ಮುಹಮ್ಮದ್ ಅವರ ಖಾತೆಯಿಂದಲೇ ಹಣ ಸುಲಿಯಲಾಗಿದೆ. ಇದು ಗಮನಕ್ಕೆ ಬಂದ ತಕ್ಷಣ ವಾಹನವನ್ನು ಟೋಲ್ ಗೇಟಲ್ಲೇ ನಿಲ್ಲಿಸಿ ಪ್ರಶ್ನಿಸಿದ್ದಾರೆ.
ಸ್ಥಳಕ್ಕೆ ಬಂದ ಟೋಲ್ ಅಧಿಕಾರಿಗಳು ತಪ್ಪಿನ ಅರಿವಾಗಿ ಹಣವನ್ನು ಮರು ಪಾವತಿಸುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ಬಂದ ಪಡುಬಿದ್ರಿ ಎಸ್ಸೈ ಎಂ.ಎಸ್.ಪ್ರಸನ್ನ ಅವರು ಟೋಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಎಸ್ಸಿಯವರಿದ್ದ ಸಭೆಯಲ್ಲಿಯೇ ಸನೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಆದೇಶ ಮಾಡಿದರೂ ಅವರ ಆದೇಶವನ್ನು ಮೀರಿ ಟೋಲ್ ಪಡೆದಿರುವುದು ಸರಿಯಾದ ಕ್ರಮವಲ್ಲ, ಮುಂದೆ ಇದನ್ನು ಮುಂದುವರಿಸಿದ್ದಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಎಂಬುದಾಗಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಗುಲಾಂ ಮುಹಮ್ಮದ್, ನಮ್ಮೆಲ್ಲರ ಹೋರಾಟದ ಫಲವಾಗಿ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ಇದ್ದರೂ, ಕಳ್ಳ ಮಾರ್ಗದಲ್ಲಿ ಟೋಲ್ ವಸೂಲಿ ನಡೆಸಿದ್ದಾರೆ. ನನ್ನ ಗಮನಕ್ಕೆ ಬಂತು ನಾನು ಪ್ರತಿಭಟಿಸಿದೆ. ಅದೇ ಗಮನಕ್ಕೆ ಬಾರದ ಅದೆಷ್ಟೋ ವಾಹನಗಳಿಂದ ವಸೂಲಿ ನಡೆಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಎಚ್ಚರಗೊಳ್ಳಬೇಕಾಗಿದೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…