Featured

ಪಡುಬಿದ್ರಿ: ಹೆಜ್ಜೇನು ದಾಳಿ – ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಸಾವು, ಒರ್ವ ಗಂಭೀರ ಹಲವರಿಗೆ ಗಾಯ – Vishwanews24

ಪಡುಬಿದ್ರಿ: ಹೆಜ್ಜೇನು ದಾಳಿ – ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಮೃತ್ಯು, ಒರ್ವ ಗಂಭೀರ ಹಲವರಿಗೆ ಗಾಯ

ಪಡುಬಿದ್ರಿ : ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೇ ವೇಳೆ ಪಕ್ಕದಲ್ಲಿದ್ದ ಚಂದ್ರಶೇಖರ್ ರವರಿಗೂ ದಾಳಿ ನಡೆದಿದ್ದು ಅವರನ್ನು ತಕ್ಷಣ ಪಡುಬಿದ್ರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ ವಾಗಿ ಹಲವರ ಮೇಲೆ ದಾಳಿ ನಡೆಯಿತಾದರೂ ಅವರು ಓಡಿ ತಪ್ಪಿಸಿಕೊಂಡಿದ್ದಾರೆ.

ತಪ್ಪಿದ ಬಾರೀ ದುರಂತ: ಪಕ್ಕದಲ್ಲೇ ಆಂಗ್ಲ ಮಾದ್ಯಮ ಶಾಲೆಯೊಂದಿದ್ದು ಶಾಲೆ ಬಿಟ್ಟು ಶಾಲಾ ವಾಹನ ಮಕ್ಕಳನ್ನು ಹೇರಿಕೊಂಡು ಹೋಗಿದ್ದರಾದರೂ ನಡೆದುಕೊಂಡು ಹೋಗುವ ಮಕ್ಕಳು ಇನ್ನೇನು ಆ ಪ್ರದೇಶಕ್ಕೆ ಬರುತ್ತಾರೆ ಎನ್ನುವಾಗ ಸಾರ್ವಜನಿಕರು ಬೊಬ್ಬೆ ಹಾಕಿ ಮಕ್ಕಳನ್ನು ತಡೆದ್ದರಿಂದ ಬಾರೀ ಅನಾಹುತ ತಪ್ಪಿದಂತ್ತಾಗಿದೆ. ಭಾನುವಾರವಾಗಿದ್ದರೆ ಈ ಬೀಚ್ ಪ್ರದೇಶದಲ್ಲಿ ಬಾರೀ ಜನ ಸಂದಾಣಿ ಇರುತ್ತಿದ್ದು ಮತ್ತಷ್ಟು ದುರಂತ ಸಾಧ್ಯವಿತ್ತು ಎನ್ನುತ್ತಾರೆ ಸ್ಥಳೀಯರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರು ಆ ಹೆಜ್ಜೇನು ಹಿಂಡನ್ನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

7 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

10 hours ago