ಪಡುಬಿದ್ರಿ : ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೇ ವೇಳೆ ಪಕ್ಕದಲ್ಲಿದ್ದ ಚಂದ್ರಶೇಖರ್ ರವರಿಗೂ ದಾಳಿ ನಡೆದಿದ್ದು ಅವರನ್ನು ತಕ್ಷಣ ಪಡುಬಿದ್ರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ ವಾಗಿ ಹಲವರ ಮೇಲೆ ದಾಳಿ ನಡೆಯಿತಾದರೂ ಅವರು ಓಡಿ ತಪ್ಪಿಸಿಕೊಂಡಿದ್ದಾರೆ.
ತಪ್ಪಿದ ಬಾರೀ ದುರಂತ: ಪಕ್ಕದಲ್ಲೇ ಆಂಗ್ಲ ಮಾದ್ಯಮ ಶಾಲೆಯೊಂದಿದ್ದು ಶಾಲೆ ಬಿಟ್ಟು ಶಾಲಾ ವಾಹನ ಮಕ್ಕಳನ್ನು ಹೇರಿಕೊಂಡು ಹೋಗಿದ್ದರಾದರೂ ನಡೆದುಕೊಂಡು ಹೋಗುವ ಮಕ್ಕಳು ಇನ್ನೇನು ಆ ಪ್ರದೇಶಕ್ಕೆ ಬರುತ್ತಾರೆ ಎನ್ನುವಾಗ ಸಾರ್ವಜನಿಕರು ಬೊಬ್ಬೆ ಹಾಕಿ ಮಕ್ಕಳನ್ನು ತಡೆದ್ದರಿಂದ ಬಾರೀ ಅನಾಹುತ ತಪ್ಪಿದಂತ್ತಾಗಿದೆ. ಭಾನುವಾರವಾಗಿದ್ದರೆ ಈ ಬೀಚ್ ಪ್ರದೇಶದಲ್ಲಿ ಬಾರೀ ಜನ ಸಂದಾಣಿ ಇರುತ್ತಿದ್ದು ಮತ್ತಷ್ಟು ದುರಂತ ಸಾಧ್ಯವಿತ್ತು ಎನ್ನುತ್ತಾರೆ ಸ್ಥಳೀಯರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರು ಆ ಹೆಜ್ಜೇನು ಹಿಂಡನ್ನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…